ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ 1442 ರೌಡಿ ಶೀಟರ್ಸ್ ಇದ್ದು, ಜಿಲ್ಲೆಯಲ್ಲಿ ಗಣೇಶ ಹಬ್ಬ ಹಾಗೂ ಮೊಹರಂ ವೇಳೆ ಶಾಂತಿ ಕಾಪಾಡುವ ನಿಟ್ಟಿನಲ್ಲಿ ನಿಗಾ ವಹಿಸಲಾಗಿದೆ.
ವಯಸ್ಸಾದವರು, ಪ್ರಕರಣ ಖುಲಾಸೆಗೊಂಡವರು, ಊರು ಬಿಟ್ಟು ಹೋಗಿ ಬೇರೆ ಕಡೆ ನೆಲೆಸಿದವರು ಹಾಗೂ ಜೀವನದಲ್ಲಿ ಬದಲಾಗಿ ಬದುಕು ನಡೆಸುತ್ತಿರುವವರನ್ನು ಸದ್ಯದಲ್ಲಿಯೇ ರೌಡಿ ಶೀಟರ್ಸ್ನಿಂದ ತೆಗೆದು ಹಾಕುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಾಮಾಜಿಕ ಮಾಧ್ಯಮಗಳ ಬಗ್ಗೆ ಪ್ರತಿಯೊಬ್ಬರು ಜಾಗೃತಿ ವಹಿಸಬೇಕು. ಇದಕ್ಕೆ ಹೊಸ ಕಾನೂನು ಮಾಡಬೇಕೆಂದು ಸರ್ಕಾರದ ಮಟ್ಟದಲ್ಲಿ ಈಗಾಗಲೇ ಚರ್ಚೆ ನಡೆದಿದೆ. ಅನಾವಶ್ಯಕವಾಗಿ ಜನರ ನೆಮ್ಮದಿ, ಸಾಮಾಜಿಕ ಸ್ವಾಸ್ಥ್ಯ ಕೆಡಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಮೊಬೈಲ್ ದುರ್ಬಳಕೆ ಕಡಿಮೆ ಆಗಬೇಕು ಎಂದರು.



