Connect with us

Dvgsuddi Kannada | online news portal | Kannada news online

ಕೋವಿಡ್-19 ನಿರ್ವಹಣೆಯಲ್ಲಿ ನಯಾಪೈಸೆ ಅವ್ಯವಹಾರ ನಡೆದಿಲ್ಲ: ಸಚಿವ  ಶ್ರೀರಾಮುಲು

ಪ್ರಮುಖ ಸುದ್ದಿ

ಕೋವಿಡ್-19 ನಿರ್ವಹಣೆಯಲ್ಲಿ ನಯಾಪೈಸೆ ಅವ್ಯವಹಾರ ನಡೆದಿಲ್ಲ: ಸಚಿವ  ಶ್ರೀರಾಮುಲು

 ಡಿವಿಜಿ ಸುದ್ದಿ, ದಾವಣಗೆರೆ: ರಾಜ್ಯದಲ್ಲಿ ಕೋವಿಡ್ ಸೋಂಕನ್ನು ಸಮರೋಪಾದಿಯಲ್ಲಿ ನಿರ್ವಹಿಸಲಾಗುತ್ತಿದೆ. ಕೋವಿಡ್ ನಿಯಂತ್ರಣದಲ್ಲಿ ಒಂದು ನಯಾಪೈಸೆಯ ಅವ್ಯಹಾರ ಆಗಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.

100 ಹಾಸಿಗೆಯ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿ  ಮಾತನಾಡಿದ ಅವರು,  ರಾಜ್ಯದಲ್ಲಿ ಕೋವಿಡ್ ನಿಂತ್ರಿಸಲು ಉತ್ತಮ ರೀತಿಯಲ್ಲಿ  ಕೆಲಸ ಮಾಡಲಾಗುತ್ತಿದೆ. ವಿರೋಧ ಪಕ್ಷದವರ ಆರೋಪದಲ್ಲಿ ಹುರುಳಿಲ್ಲ. ಯಾವುದೇ ರೀತಿಯ ತನಿಖೆಗೆ ನಾವು ಸಿದ್ದರಿದ್ದೇವೆ ಎಂದರು.

ಮಾನ್ಯ ಮುಖಮಂತ್ರಿಗಳ ನೇತೃತ್ವದಲ್ಲಿ ನಾವೆಲ್ಲ ಒಗ್ಗೂಡಿ ಸಮನ್ವಯದಿಂದ ಕೆಲಸ ಮಾಡುತ್ತಿದ್ದೇವೆ. ಸಂಘ ಸಂಸ್ಥೆಗಳೂ ಸಹ ನಮ್ಮೊಂದಿಗೆ ದುಡಿಯುತ್ತಿದ್ದಾರೆ. ಆರೋಪ ಮಾಡುವುದಕ್ಕಿಂತ ನಮ್ಮೊಂದಿಗೆ ಕೈಜೋಡಿಸಿ ಕೆಲಸ ಮಾಡುವುದು ಒಳಿತು. ಕೋವಿಡ್ ನಿರ್ವಹಣೆ ವಿಷಯವಾಗಿ ವಿಶ್ವವೇ ಭಾರತದ ಕೆಲಸವನ್ನು ಶ್ಲಾಘಿಸುತ್ತಿದೆ ಎಂದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top