ಡಿವಿಜಿ ಸುದ್ದಿ, ದಾವಣಗೆರೆ: ಜೀವನದಲ್ಲಿ ಮನನೊಂದು ಬಿಇ ಓದುತ್ತಿರುವ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ನಗರದ ಕುಂದುವಾಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಸ್ ಎಸ್ ಬಡಾವಣೆ ನಿವಾಸಿ ರಂಜಿತ್ ಭಟ್(24), ಸಾವನ್ನಪ್ಪಿದ್ದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ನಗರದ ಜಿಎಂಐಟಿ ಕಾಲೇಜಿನಲ್ಲಿ ಬಿಇ ವಿದ್ಯಾಭ್ಯಾಸ ನಡೆಸುತ್ತಿದ್ದನು.
ವಿದ್ಯಾಭ್ಯಾಸ ವಿಚಾರವಾಗಿ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



