ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀ ತರಳಬಾಳು ಜಗದ್ಗುರು ರೆಸಿಡೆನ್ಸಿಯಲ್ ಸ್ಕೂಲ್ ಅನುಭವಮಂಟಪದ ಶಾಲಾ ವಾರ್ಷಿಕೋತ್ಸವ ಸಮಾರಂಭವು ಇತ್ತೀಚೆಗೆ ಅದ್ಧೂರಿಯಾಗಿ ಜರುಗಿತು.

ಅನುಭವ ಮಂಟಪ ಶಾಲಾ ಸಂಕೀರ್ಣದ ಅಕ್ಕಮಹಾದೇವಿ ನರ್ಸರಿ ಶಾಲೆ, ಶ್ರೀ ತರಳಬಾಳು ಜಗದ್ಗುರು ಕಿರಿಯ ಪ್ರಾಥಮಿಕ ಶಾಲೆ, ಶ್ರೀ ತರಳಬಾಳು ಜಗದ್ಗುರು ಹಿರಿಯ ಪ್ರಾಥಮಿಕ ಶಾಲೆ, ಶ್ರೀ ತರಳಬಾಳು ಜಗದ್ಗುರು ಪ್ರೌಢಶಾಲೆ, ಶ್ರೀ ತರಳಬಾಳು ಸೆಂಟ್ರಲ್ ಸ್ಕೂಲ್, ಶ್ರೀ ತರಳಬಾಳು ಐ ಸಿ ಎಸ್ ಇ, ಶ್ರೀ ತರಳಬಾಳು ಜಗದ್ಗುರು ಕಾಲೇಜು ವಿಭಾಗದ ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಮಟ್ಟದ ವಿವಿ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇದಲ್ಲದೆ ಮಕ್ಕಳಲ್ಲಿ ವಿಜ್ಞಾನ, ಕಲೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು ಜೊತೆಗೆ ಶಾಲಾ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಸಂಯೋಜಿಸಲಾಗಿತ್ತು.





