ಡಿವಿಜಿ ಸುದ್ದಿ, ದಾವಣಗೆರೆ: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಿಂದ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಅಂತಿಮ ಆದ್ಯತಾ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ.
ಶಿಕ್ಷಕರುಗಳು ಈ ಜೇಷ್ಠತಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು 07 ದಿನಗಳೊಳಗಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ ತಿಳಿಸಿದ್ದಾರೆ.



