ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿಯ ಆಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಸಿ.ನಿರಂಜನ, ಖಜಾನಾಧಿಕಾರಿ ರಾಜಣ್ಣ, ಕನ್ನಡ ಮತ್ತು ಸಂಸ್ಕೃಂತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ನಗರ ಡಿವೈಎಸ್ಪಿ ನಾಗೇಶ್ ಐತಾಳ್, ಕುಂಬಾರರ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಕುಂಚೂರು, ಸಮಾಜದ ಮುಖಂಡರಾದ ಹಿರಿಯ ನಿವೃತ್ತಿ ಶಿಕ್ಷಕರಾದ ಮಲ್ಲಿಕಾರ್ಜುನ್, ಪ್ರವೀಣ್ಕುಮಾರ್, ಪುಷ್ಪರಾಜ್, ಸಿದ್ದೇಶ್, ಕರಿಬಸಪ್ಪ ಮತ್ತು ಸಮಾಜದ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



