ಡಿವಿಜಿ ಸುದ್ದಿ, ದಾವಣಗೆರೆ: ಲಾಕ್ ಡೌನ್ ಹಿನ್ನೆಲೆ ಜಿಲ್ಲೆಯಲ್ಲಿ ಬಡವರು, ಕೂಲಿ ಕಾರ್ಮಿಕರಿಗೆ ಉದ್ಯಮಿ ಉದಯ ಶಿವಕುಮಾರ್ ಅವರು ಆಹಾರ ಕಿಟ್ ನೆರವು ನೀಡಿದರು.

ನಗರದ ಸಂಗೊಳ್ಳಿರಾಯಣ್ಣ ವೃತ್ತದಲ್ಲಿ ಬಡವರಿಗೆ ಆಹಾರ ಕಿಟ್ ವಿತರಿಸಲಾಯಿತು. ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಆಹಾರ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ದಾನಿಗಳಾದ ಉದಯ ಶಿವಕುಮಾರ್, ಆಯುಕ್ತ ಬಿ.ಟಿ.ಕುಮಾರಸ್ವಾಮಿ, ಮಾಜಿ ದೂಡಾ ಅಧ್ಯಕ್ಷರಾಗಿದ್ದ ಯಶವಂತರಾವ್ ಜಾಧವ್ ಉಪಸ್ಥಿತರಿದ್ದರು.



