ಡಿವಿಜಿಸುದ್ದಿ.ಕಾಂ,ದಾವಣಗೆರೆ: ಮಹರ್ಷಿ ವಾಲ್ಮಿಕಿಯನ್ನು ಕೇವಲ ಒಂದು ಸಮಾಜಕ್ಕೆ ಮಾತ್ರ ಸೀಮಿತಗೊಳಿಸುವುದು ಸರಿಯಲ್ಲ. ಅವರು, ಎಲ್ಲ ಸಮಾಜಕ್ಕೂ ಸಲ್ಲುವಂತಾಗಬೇಕೆಂದು ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದರು.
ನಗರದ ಗುಂಡಿಮ ಹಾದೇವಪ್ಪ ಕಲ್ಯಾಣ ಮಂದಿರದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಲ್ಮೀಕಿ ಜಯಂತಿ ಆಚರಣೆ ಜಾರಿಗೆ ತಂದರು. ಮಹರ್ಷಿ ವಾಲ್ಮೀಕಿ ಅವರು ರಾಮಯಣದಂತಹ ಮಹಾ ಕಾವ್ಯ ರಚಿಸಿ, ಇಡೀ ಪ್ರಪಂಚಕ್ಕೆ ಮಹರ್ಷಿಯಾಗಿದ್ದಾರೆ ಎಂದರು.
ಅವರ ಅನುಯಾಯಿಗಳಾಗಿ ನಾವೆಲ್ಲರು ಅವರ ಆದರ್ಶಗಳನ್ನು ಪಾಲಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರು ಚೆನೈನ ಮಾಮಲಾಪುರಂನ ಬೀಚ್ ನಲ್ಲಿ ಬೆಳಗ್ಗೆ ಪ್ಲಾಸ್ಟಿಕ್ ಬಾಟಲಿಗಳನ್ನು ಆಯ್ದು ಸ್ವಚ್ಚತಾ ಅಭಿಯಾನ ನಡೆಸಿದ್ದಾರೆ. ದೇಶದ ಒಬ್ಬ ಪ್ರಧಾನಿಯೇ ಬರಿಗಾಲಿನಲ್ಲಿ ಈ ರೀತಿ ಸ್ವಚ್ಚತಾ ಕಾರ್ಯ ನಡೆಸಿ ರುವುದು ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡುವತ್ತಾ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೈಲಜಾ ಬಸವರಾಜ್ ಮಾತನಾಡಿ, ವಾಲ್ಮೀಕಿ ರಾಮಯಣ ವಿಶ್ವಮಾನ್ಯತೆ ಪಡೆದಿದೆ. ಅದರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಈ ವೇಳೆ ವಿವಿಧಬೇಡಿಕೆಗಳನ್ನು ಈಡೇರಿಸುವಂತೆ ಸಂಸದರಿಗೆ ಸಮಾಜ ಬಾಂಧವರು ಮನವಿ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಎಸ್.ಎ.ರವೀಂದ್ರನಾಥ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ತಾ.ಪಂ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಜಿ.ಪಂ ಸದಸ್ಯ ಬಸವಂತಪ್ಪ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ಜಿ.ಪಂ ಸಿಇಓ ಪದ್ಮಾಬಸವಂತಪ್ಪ, ಎಂ.ಹೆಚ್.ಸುರೇಶ್ ರೆಡ್ಡಿ, ಸಮಾಜದ ಮುಖಂಡರಾದ ಬಿ.ವೀರಣ್ಣ, ದಾಸಕರಿಯಪ್ಪ, ಹದಡಿ ಹಾಲಪ್ಪ, ಆಂಜನೇಯ ಗುರೂಜಿ,ವಿದ್ಯಾಶ್ರೀ, ಗೌರಮ್ಮ ಮತ್ತಿತರರಿದ್ದರು. ಕಾರ್ಯಕ್ರಮದ ನಂತರ ಮೈಸೂರಿನ ಸಾಹಿತಿ ಡಾ.ಅನಸೂಯ ಕೆಂಪನಹಳ್ಳಿ ವಿಶೇಷ ಉಪನ್ಯಾಸ ನೀಡಿದರು.



