ದಾವಣಗೆರೆ ಜಿಲ್ಲಾ ಪಂಚಾಯತಿಗೆ ರಾಷ್ಟ್ರೀಯ ದೀನದಯಾಳ್ ಉಪಾಧ್ಯಾಯ ಪುರಸ್ಕಾರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: 2017-18 ನೇ ಸಾಲಿನ ರಾಷ್ಟ್ರೀಯ ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ ಪುರಸ್ಕಾರ  ದಾವಣಗೆರೆ ಜಿಲ್ಲಾ ಪಂಚಾಯತ್‍ಗೆ   ಲಭಿಸಿದೆ.

ಜಿಲ್ಲೆಯ ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಸಂಬಂಧಿತ ಇಲಾಖೆಗಳು ಸಾಧಿಸಿರುವ ಒಟ್ಟಾರೆ ಪ್ರಗತಿಯನ್ನು ಪರಿಗಣಿಸಿ ರಾಜ್ಯದಲ್ಲಿ ಒಂದು ಜಿಲ್ಲೆಗೆ ಈ ಪ್ರಶಸ್ತಿ ನೀಡಲಾಗಿದೆ.

ಈ ಸಾಲಿನಲ್ಲಿ ದಾವಣಗೆರೆ ಕೇಂದ್ರ ತಂಡ ಭೇಟಿ ನೀಡಿದ್ದು, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪೋಷಣ್ ಅಭಿಯಾನ, ಅಂಗನವಾಡಿ ಮಕ್ಕಳಿಗೆ ಪೌಷ್ಠಿಕ ಆಹಾರ, ಕಲಿಕೆ ಈ ಎಲ್ಲಾ ಮಾನದಂಡಗಳನ್ನು ಸಮಗ್ರವಾಗಿ ಸಂಗ್ರಹಿಸಿದ್ದು, ಕೇಂದ್ರ ತಂಡ ವರದಿ ತಯಾರಿಸಿತ್ತು. ಅದರ ಆಧಾರದಲ್ಲಿ ಜಿಲ್ಲೆ 1ನೇ ಸ್ಥಾನದಲ್ಲಿದ್ದ ಹಿನ್ನೆಲೆಯಲ್ಲಿ ಡಿ.22 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಕರ್ನಾಟಕ ಪಂಚಾಯತ್ ರಾಜ್ ಪರಿಷತ್‍ನ ಸಂಸ್ಥಾಪನಾ ದಿನಾಚರಣೆಯಲ್ಲಿ ದಾವಣಗೆರೆ ಜಿ.ಪಂ ಅಧ್ಯಕ್ಷರಾದ ಯಶೋಧಮ್ಮ ಮರುಳಸಿದ್ದಪ್ಪ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ ಪ್ರಶಸ್ತಿ ಸ್ವೀಕರಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *