ಡಿವಿಜಿ ಸುದ್ದಿ, ದಾವಣಗೆರೆ: ಇಂದಿನಿಂದಲೇ ರೈಲ್ವೆ ರಿಸರ್ವೇಷನ್ ಕೌಂಟರ್ ತೆರೆದಿದ್ದು, ಹಂತ ಹಂತವಾಗಿ ವ ಎಲ್ಲ ಕಡೆ ರಿಸರ್ವೇಷನ್ ಕೌಂಟರ್ ತೆರೆಯಲಾಗುವುದು ಎಂದು ನೈರುತ್ಯ ರೈಲ್ವೆ ವಿಭಾಗೀಯ ವಾಣಿಜ್ಯ ವ್ಯವಸ್ಥಾಕರು ತಿಳಿಸಿದ್ದಾರೆ.
ಜೂನ್ 1 ರಿಂದ ಪ್ರಾರಂಭವಾಗುವ 100 ಜೋಡಿ ರೈಲು ಸೇವೆಗಳಿಗೆ ಕಾಯ್ದಿರಿಸಿದ ಟಿಕೆಟ್ ಬುಕ್ ಮಾಡಲು ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ಪಿಆರ್ಎಸ್ ಕೌಂಟರ್ಗಳು ಮೈಸೂರು, ದಾವಣಗೆರೆ, ಶಿವಮೊಗ್ಗ ಟೌನ್ ಮತ್ತು ಹಾಸನ ನಿಲ್ದಾಣಗಳಲ್ಲಿ ಇಂದಿನಿಂದ ಕಾರ್ಯಾರಂಭಗೊಂಡಿವೆ.
ಮೇ.25 ರಿಂದ ಹಣ ಮರುಪಾವತಿ
ದೇಶದಲ್ಲಿ ಲಾಕ್ಡೌನ್ ಸಂದರ್ಭದಲ್ಲಿ ರದ್ದುಪಡಿಸಲಾಗಿದ್ದ ರೈಲು ಗಾಡಿಗಳಲ್ಲಿ ಟಿಕೆಟ್ ಹೊಂದಿದ್ದ ಪ್ರಯಾಣಿಕರ ಹಣ ಮರುಪಾವತಿಯ ಸೌಲಭ್ಯವನ್ನು ಸಹ ಈ ಕೌಂಟರ್ಗಳಲ್ಲಿ ಮೇ 25 ರಿಂದ ಪಡೆಯಬಹುದು. ಈ ಮೊದಲು ತಿಳಿಸಿದಂತೆ ರಾಜ್ಯದೊಳಗೆ 2 ಜೋಡಿ ಅಂತರ್ ಜಿಲ್ಲಾ ರೈಲುಗಳು ಬೆಂಗಳೂರಿನಿಂದ ಬೆಳಗಾವಿಗೆ (ವಾರದಲ್ಲಿ ಮೂರು ದಿನ) ಎಕ್ಸ್ಪ್ರೆಸ್ ವಿಶೇಷ ರೈಲು ಮತ್ತು ಬೆಂಗಳೂರಿನಿಂದ ಮೈಸೂರಿಗೆ (ಭಾನುವಾರ ಹೊರತುಪಡಿಸಿ ವಾರದಲ್ಲಿ ಆರು ದಿನ) ಎಕ್ಸ್ಪ್ರೆಸ್ ವಿಶೇಷ ರೈಲು ಇಂದಿನಿಂದಲೇ ಪ್ರಾರಂಭಿಸಲಾಗಿದೆ.
ಸಾಮಾಜಿಕ ಅಂತರ ಮತ್ತು ಇತರೆ ನಿಗದಿತ ಕೋವಿಡ್ -19 ಕ್ರಮ ವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಬುಕಿಂಗ್ ಕಚೇರಿಗಳು ಸೇರಿದಂತೆ ರೈಲ್ವೆಯ ಆವರಣದಲ್ಲಿ ಸ್ವಚ್ಚತೆ/ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಲು ರೈಲ್ವೆಹರ ಸಹಕಾರ ನೀಡಲು ಗ್ರಾಹಕರಲ್ಲಿ ಕೋರಲಾಗಿದೆ.ಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲಿನ ಮೊದಲ ಸೇವೆಯು ಇಂದು ಮೈಸೂರಿನಿಂದ ನಿಗದಿತ ಸಮಯವಾದ 13:45 ಗಂಟೆಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.



