Connect with us

Dvgsuddi Kannada | online news portal | Kannada news online

ಮಕ್ಕೆಜೋಳಕ್ಕೆ 5 ಸಾವಿರ ನೆರವು; ರೈತರಿಗೆ ತಲುಪಿಸಲು ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಬೇಕು: ಜಿಲ್ಲಾಧಿಕಾರಿ

ಪ್ರಮುಖ ಸುದ್ದಿ

ಮಕ್ಕೆಜೋಳಕ್ಕೆ 5 ಸಾವಿರ ನೆರವು; ರೈತರಿಗೆ ತಲುಪಿಸಲು ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಬೇಕು: ಜಿಲ್ಲಾಧಿಕಾರಿ

ಡಿವಿಜಿ ಸುದ್ದಿ, ದಾವಣಗೆರೆ : 2019-20 ನೇ ಸಾಲಿನಲ್ಲಿ ಮುಸುಕಿನ ಜೋಳ ಬೆಳೆದು ಕೋವಿಡ್-19 ಲಾಕ್‍ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆ ರೂ. 5 ಸಾವಿರ ಆರ್ಥಿಕ ನೆರವು ಘೋಷಿಸಿದೆ. ಇದನ್ನು ಅರ್ಹ ರೈತರಿಗೆ ತಲುಪಿಸಲು ಅದಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಕೃಷಿ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಾಕ್‍ಡೌನ್‍ನಿಂದಾಘಿ ಮೆಕ್ಕೆಜೋಳ ಬೇಡಿಕೆ ಕಳೆದುಕೊಂಡಿತ್ತು. ಇದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ  ಆರ್ಥಿಕ ನೆರವು ನೀಡಿದ್ದು, ಅದನ್ನು ಅಮರ್ಪಕವಾಗಿ ತಲುಪಿಸಬೇಕಿದೆ.

davangere market

ರೈತರಿಗೆ ಅಲ್ಪಾವಧಿ ಆರ್ಥಿಕ ನೆರವು ನೀಡಲು ಕರ್ನಾಟಕ ಸರ್ಕಾರದ ಇ-ಆಡಳಿತ ವತಿಯಿಂದ ಕೈಗೊಳ್ಳಲಾದ 2019-20ನೇ ಸಾಲಿನಲ್ಲಿ ಮೆಕ್ಕೆಜೋಳ ಬೆಳೆದ ರೈತರಿಗೆ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಈಗ ದಾಖಲಾಗಿರುವ ಬೆಳೆ ವಿವರಗಳ ಆಧಾರದ ಮೇರೆಗೆ ಪಾವತಿಸಬೇಕು. ಜೊತೆಗೆ ಬೆಳೆ ಸಮೀಕ್ಷೆಯಲ್ಲಿ ಇರುವಂತೆ ಮೆಕ್ಕೆಜೋಳ ಬೆಳೆಗಾರರ ಪಟ್ಟಿಯನ್ನು ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೆಂದ್ರ ಹಾಗೂ ತಾಲ್ಲೂಕು ಕಚೇರಿಯ ನಾಪಫಲಕದಲ್ಲಿ ಪ್ರದರ್ಶಿಸಬೇಕು. ಮೆಕ್ಕೆಜೋಳ ಬೆಳೆಗಾರರ ಹೆಸರು ಪಟ್ಟಿಯಲ್ಲಿ ಇದರಿದ್ದರಲ್ಲಿ,  ಅಂತಹ ರೈತರಿಂದ ಅರ್ಜಿ ಪಡೆಯಬೇಕು ಎಂದು ಯೋಜನೆ ಕುರಿತು ವಿವರಿಸಿದರು.

ಬೆಳೆ ಸಮೀಕ್ಷೆಯಲ್ಲಿ ದಾಖಲಾಗದಿದ್ದಲ್ಲಿ ಅಂತಹ ರೈತರಿಂದ ಅರ್ಜಿ ಪಡೆದು ಹೋಬಳಿ ಮಟ್ಟದಲ್ಲಿ ಕೃಷಿ ಅಧಿಕಾರಿ. ಸಹಾಯಕ ಅಧಿಕಾರಿ ಹಾಗೂ ಗ್ರಾಮ ಲೆಕ್ಕಿಗರನ್ನು ಒಳಗೊಂಡ ತಂಡವನ್ನು ರಚಿಸಿ ಕೃಷಿ ಬೆಳೆಗಳ ತಾಲ್ಲೂಕುಗಳನ್ನು ಪರಿಶೀಲಿಸಿ, ಸ್ಥಳೀಯವಾಗಿ ಪಂಚನಾಮೆ ಮಾಡಿಕೊಂಡು ಪರಿಹಾರ ವಿತರಿಸಲು ತಾಲ್ಲೂಕು ಮಟ್ಟದ ಸಮಿತಿಗೆ ಶಿಫಾರಸ್ಸು ಮಾಡಬೇಕು ಎಂದು ತಿಳಿಸಿದರು.

ಅಧಿಕಾರಿಗಳು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು. ಸರ್ಕಾರದ ಸೂಚನೆ ಪಾಲಿಸುವ ಮೂಲಕ ರೈತರ ಸಹಾಯಕ್ಕೆ ಮುಂದಾಗಬೇಕು. ಈ ಬಾರಿ ಮಳೆ ಜಾಸ್ತಿ ಬರಬಹುದು. ಮುನ್ನೆಚರಿಕಾ ಕ್ರಮವಾಗಿ ಅಧಿಕಾರಿಗಳು ತಯಾರಿ ನಡೆಸಿಕೊಂಡಿರಬೇಕು. ಕೊರೊನಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಿದಂತೆ, ಜಿಲ್ಲೆಯಲ್ಲಿ ಪ್ರವಾಹ ಬಂದರೆ ಕೊರೊನಾ ಜೊತೆ ಜೊತೆಗೆ ಕೆಲಸ ಮಾಡಲು ಸನ್ನದ್ಧರಾಗಬೇಕು. ಯಾವುದೇ ರೀತಿಯ ಪ್ರಾಣ ಹಾನಿ, ಜೀವ ಹಾನಿ ಆಗದಂತೆ ನೋಡಿಕೊಳ್ಳಬೇಕು ಎಂದರು.

ಕೃಷಿ ಜಂಟಿ ಸಹಾಯಕ ನಿರ್ದೇಶಕರು ಶರಣಪ್ಪ ಮುದಗಲ್, ತಹಶೀಲ್ದಾರ್ ಗಿರೀಶ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಸೋಮವಾರದ ರಾಶಿ ಭವಿಷ್ಯ 30 ಜೂನ್ 2025

    By

    ಈ ರಾಶಿಯವರಿಗೆ ಉದ್ಯೋಗದಲ್ಲಿ ವರ್ಗಾವಣೆ ಪ್ರಮೋಷನ್ ವೇತನದಲ್ಲಿ ಏರಿಕೆ ಸಂಭವ, ಚಿನ್ನದ ತಟ್ಟೆಯಲ್ಲಿ ಊಟ ಮಾಡುವ ಏಕೈಕ ರಾಶಿ ಎಂದರೆ ಇವರು,...

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

To Top