ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಮನವಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ  ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಜಾಥಾ ನಡೆಸಿ, ಸರ್ಕಾರಿ ನೌಕರರೆಂದು ಘೋಷಿಸುವಂತೆ ಮನವಿ ಮಾಡಿದರು. ಸಂಬಳ ನಿಗದಿ, ವರ್ಗಾವಣೆ, ಬಸ್ ಖರೀದಿ, ಪ್ರಯಾಣ ದರ ನಿಗದಿ ಸೇರಿದಂತೆ ರಸ್ತೆ ಸಾರಿಗೆ ಇಲಾಖೆ ಪ್ರತಿಯೊಂದು ನಿರ್ಧಾರವನ್ನು ಸರ್ಕಾವೇ ತಗೆದುಕೊಳ್ಳುತ್ತದೆ. ಆದರೆ, ನೌಕರನ್ನು ಮಾತ್ರ ಸರ್ಕಾರಿ ನೌಕರ ಎಂದು ಪರಿಗಣಿಸಿಲ್ಲ.

ksrtc employs 2

ಇನ್ನು ವೇತನ ಹೆಚ್ಚಳದಲ್ಲಿಯೂ ತಾರತಮ್ಯವಾಗಿದ್ದು, ಎಲ್ಲಾ ಸರ್ಕಾರಿ ನೌಕರಿಗೆ ಇರುವ ವೇತನಕ್ಕಿಂತ ಶೇ . 30 ರಷ್ಟು ಕಡಿಮೆ ವೇತನ ತಗೆದುಕೊಳ್ಳುತ್ತಿದ್ದೇವೆ. ಈ ಹಣದಿಂದ ನಮ್ಮ ಮಕ್ಕಳ ವಿದ್ಯಾಭ್ಯಾಸ, ಕುಟುಂಬ ನಿರ್ವಹಣೆ ತುಂಬಾ ಕಷ್ಟವಾಗಿದೆ. ನಮ್ಮ ಜಾಥಾದಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ವಾರದ ರಜೆ ಇರುವರು, ಶಿಫ್ಟ್ ಮುಗಿದವರು ಮಾತ್ರ ಭಾಗಿಯಾಗಿದ್ದೇವೆ. ಕಳೆದ ಮೂರು ವರ್ಷದಿಂದ ನಮ್ಮನ್ನು ಸರ್ಕಾರಿ ನೌಕರೆಂದು ಪರಿಗಣಿಸಿ ಎಂದು ಆಗ್ರಹಿಸುತ್ತಾ ಬಂದಿದ್ದರೂ, ಸರ್ಕಾರ ಗಮನ ಹರಿಸುತ್ತಿಲ್ಲ. ಹೀಗಾಗಿ ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ನಮ್ಮನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು ಎಂದು ನಮವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *