ಡಿವಿಜಿ ಸುದ್ದಿ, ವಿಜಯಪುರ: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ಬೆಂಗಳೂರು ನಗರ ಸೇರಿದಂತೆ ಜಿಲ್ಲೆಗಳಲ್ಲೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಸ್ಪಿ ಗಳಿಗೆ ಸೂಚಿಸಿದ್ದೇನೆ ಎಂದು ಡಿಜಿ ಐಜಿಪಿ ಪ್ರವೀಣ್ ಸೂದ್ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ, ಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಡ್ರಗ್ಸ್ ಒಳ ಬಾರದಂತೆ ತಡೆಯುವುದು ಹಾಗೂ ಹೇಗೆ ಹತೋಟಿಗೆ ತರಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಪೊಲೀಸ್ ಕಾರ್ಯಾಚರಣೆಗಳ ಬಗ್ಗೆ ಶ್ರೀಘ್ರ ಫಲಿತಾಂಶ ಸಿಗಲಿದೆ ಎಂದರು.

ಈಗಾಗಲೇ ಹಲವೆಡೆ ದಾಳಿ ನಡೆಸಿ ಡ್ರಗ್ ಸೀಜ್ ಮಾಡಲಾಗಿದೆ. ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳುವಂತೆ ಐಜಿಪಿ ಗಳಿಗೆ ಹಾಗೂ ಆಯಾ ಜಿಲ್ಲಾ ಎಸ್ಪಿ ಗಳಿಗೆ ಸೂಚಿಸಿದ್ದೇನೆ. ಡ್ರಗ್ ಮಾಫಿಯಾ ಬಗ್ಗೆ ಕಾರ್ಯಾಚರಣೆ ನಡೆಯುತ್ತಿದೆ.
ಡ್ರಗ್ಸ್ ಪತ್ತೆಹಚ್ಚುವುದು, ತಡೆಗಟ್ಟುವ ಕೆಲಸ ನಿರಂತರ ನಡೆಯುತ್ತಿದೆ. ಡ್ರಗ್ಸ್ ಮುಕ್ತ ರಾಜ್ಯ ಮಾಡಲು ತೀರ್ಮಾನಿಸಲಾಗಿದೆ. ರಾಜ್ಯದಿಂದ ಆದಷ್ಟು ಬೇಗ ಡ್ರಗ್ಸ್ ಹೊರಹಾಕಲಿದ್ದೇವೆ ಎಂದು ಭರವಸೆ ನೀಡಿದರು.



