Connect with us

Dvgsuddi Kannada | online news portal | Kannada news online

ಡ್ರಗ್ಸ್ ಮಾಫಿಯಾ ಬಗ್ಗೆ ಎಲ್ಲಾ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸಿ:  ಡಿಜಿಐಜಿಪಿ ಪ್ರವೀಣ್ ಸೂದ್ ಸೂಚನೆ

ಪ್ರಮುಖ ಸುದ್ದಿ

ಡ್ರಗ್ಸ್ ಮಾಫಿಯಾ ಬಗ್ಗೆ ಎಲ್ಲಾ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸಿ:  ಡಿಜಿಐಜಿಪಿ ಪ್ರವೀಣ್ ಸೂದ್ ಸೂಚನೆ

ಡಿವಿಜಿ ಸುದ್ದಿ, ವಿಜಯಪುರ: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ  ಬಗ್ಗೆ  ಬೆಂಗಳೂರು ನಗರ ಸೇರಿದಂತೆ ಜಿಲ್ಲೆಗಳಲ್ಲೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಸ್‍ಪಿ ಗಳಿಗೆ ಸೂಚಿಸಿದ್ದೇನೆ ಎಂದು ಡಿಜಿ ಐಜಿಪಿ ಪ್ರವೀಣ್ ಸೂದ್ ಹೇಳಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ, ಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಡ್ರಗ್ಸ್ ಒಳ ಬಾರದಂತೆ ತಡೆಯುವುದು ಹಾಗೂ  ಹೇಗೆ ಹತೋಟಿಗೆ ತರಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಪೊಲೀಸ್ ಕಾರ್ಯಾಚರಣೆಗಳ ಬಗ್ಗೆ ಶ್ರೀಘ್ರ ಫಲಿತಾಂಶ ಸಿಗಲಿದೆ ಎಂದರು.

Ganja CCB police

ಈಗಾಗಲೇ ಹಲವೆಡೆ ದಾಳಿ ನಡೆಸಿ ಡ್ರಗ್ ಸೀಜ್ ಮಾಡಲಾಗಿದೆ. ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳುವಂತೆ ಐಜಿಪಿ ಗಳಿಗೆ ಹಾಗೂ ಆಯಾ ಜಿಲ್ಲಾ ಎಸ್‍ಪಿ ಗಳಿಗೆ ಸೂಚಿಸಿದ್ದೇನೆ. ಡ್ರಗ್ ಮಾಫಿಯಾ ಬಗ್ಗೆ ಕಾರ್ಯಾಚರಣೆ ನಡೆಯುತ್ತಿದೆ.

ಡ್ರಗ್ಸ್ ಪತ್ತೆಹಚ್ಚುವುದು, ತಡೆಗಟ್ಟುವ ಕೆಲಸ ನಿರಂತರ ನಡೆಯುತ್ತಿದೆ.  ಡ್ರಗ್ಸ್ ಮುಕ್ತ ರಾಜ್ಯ ಮಾಡಲು ತೀರ್ಮಾನಿಸಲಾಗಿದೆ. ರಾಜ್ಯದಿಂದ ಆದಷ್ಟು ಬೇಗ ಡ್ರಗ್ಸ್ ಹೊರಹಾಕಲಿದ್ದೇವೆ ಎಂದು ಭರವಸೆ ನೀಡಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top