ಹೈದರಾಬಾದ್: ಪಶು ವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ಕರ್ನಾಟಕದ ಹುಬ್ಬಳಿ ಮೂಲದವರು ಎನ್ನುವುದು ವಿಶೇಷ.
ವಿಶ್ವನಾಥ್ ಸಜ್ಜನರ್ ಸೈಬರಾಬಾದ್ನಲ್ಲಿ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಮಾತ್ರವಲ್ಲ ಎನ್ ಕೌಂಟರ್ ಸ್ಪೆಷಲಿಸ್ಟ್ ಎಂದೇ ಹೆಸರು ಪಡೆದಿದ್ದರು. ಪಶು ವೈದ್ಯೆ ದಿಶಾ ಅತ್ಯಾಚಾರ ಪ್ರಕರಣದ ತನಿಖೆ ನೇತೃತ್ವ ವಹಿಸಿದ್ದ ಸಜ್ಜನರ್ ಅವರು, ಕಳೆದ ಒಂದೂವರೆ ವರ್ಷದಿಂದ ಇವರು ಸೈಬರಾಬಾದ್ನಲ್ಲಿ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದರು.

ಶುಕ್ರವಾರ ಬೆಳಗ್ಗೆ 3.30 ಕ್ಕೆ ಘಟನಾ ಸ್ಥಳಕ್ಕೆ ಆರೋಪಿಗಳನ್ನು ಕರೆದುಕೊಂಡು ಹೋಗಿ ಸ್ಥಳ ಮಹಾಜರ್ ನಡೆಸುವಾಗ ಆರೋಪಿಗಳಾದ ಆರಿಫ್, ಶಿವ, ಚನ್ನಕೇಶವಲು ಮತ್ತು ನವೀನ್ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೋಲಿಸರು ಫೈರಿಂಗ್ ನಡೆಸಿದ್ದಾರೆ.ಶಾದ್ನಗರದ ಚಟಾನ್ಪಲ್ಲಿ ಬ್ರಿಡ್ಜ್ ಮೇಲೆ ಆರೋಪಿಗಳು ಪರಾರಿಗೆ ಯತ್ನಿಸಿದಾಗ ಪೋಲಿಸ್ ಫೈರಿಂಗ್ ಆಗಿದ್ದು, ಬೆಂಗಳೂರು- ಹೈದರಾಬಾದ್ ನ್ಯಾಷನಲ್ ಹೈವೇ 44 ರಲ್ಲಿ ಈ ಘಟನೆ ನಡೆದಿದೆ.



