Connect with us

Dvgsuddi Kannada | online news portal | Kannada news online

ಕಾಂಗ್ರೆಸ್‌ ಮಾಡಿದ ಪಾಪದ ಫಲವೇ ಶಾಸಕರ ಮನೆ ಸುಟ್ಟು ಹೋಗಲು ಕಾರಣ :ಎಚ್ . ವಿಶ್ವನಾಥ್

ಪ್ರಮುಖ ಸುದ್ದಿ

ಕಾಂಗ್ರೆಸ್‌ ಮಾಡಿದ ಪಾಪದ ಫಲವೇ ಶಾಸಕರ ಮನೆ ಸುಟ್ಟು ಹೋಗಲು ಕಾರಣ :ಎಚ್ . ವಿಶ್ವನಾಥ್

ಡಿವಿಜಿ ಸುದ್ದಿ, ಮೈಸೂರು: ಶಾಸಕ ಜಮೀರ್‌ ಖಾನ್‌  ಗಲಭೆ ಮಾಡಿದವರ ಮನೆಗೆ ತೆರಳಿ ಸಾಂತ್ವನ ಹೇಳುತ್ತಿದ್ಧಾರೆ. ಆದರೆ,  ಬೆಂಕಿಯಿಂದ ಮನೆ ಕಳೆದುಕೊಂಡ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಯಾರೂ ಹೋಗುತ್ತಿಲ್ಲ. ಕಾಂಗ್ರೆಸ್‌ ಮಾಡಿದ ಪಾಪದ ಫಲದಿಂದಲೇ ಶಾಸಕರ ಮನೆ ಸುಟ್ಟು ಹೋಗಲು ಕಾರಣ  ಎಂದು ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್‌.ವಿಶ್ವನಾಥ್‌ ಹೇಳಿದರು.

ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ  ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ರಮೇಶ್‌ ಕುಮಾರ್‌ ಅವರಂತಹ ಕಾಂಗ್ರೆಸ್‌ ಮುಖಂಡರು ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಮಾಡಿದ ಭಾಷಣದ ಬೆಂಕಿ  ಈಗ ಹೊತ್ತಿ ಉರಿಯುತ್ತಿದೆ ಎಂದರಯ

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ  ಕಾಂಗ್ರೆಸ್‌ ನಾಯಕರು ಮಾಡಿದ ಭಾಷಣ, ಪ್ರಚೋದನೆ ಕಿಡಿಯೇ ಈ ಬೆಂಕಿ. ಈಗ ಈ ಬೆಂಕಿ ಕೆಂಡವಾಗಿದೆ.  ಅದನ್ನು ಆರಿಸುವ ಗೋಜಿಗೆ ಯಾರೂ ಹೋಗಿಲ್ಲ. ಆ ಕೆಂಡವನ್ನು ಹಿಡಿದು  ಕಾಂಗ್ರೆಸ್‌ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top