ಸತ್ಯವನ್ನು ಗಟ್ಟಿಯಾಗಿ ಹೇಳುವ ಧೈರ್ಯ ಕೂಡ ಕಾಂಗ್ರೆಸ್ ಗೆ  ಇಲ್ಲ: ಸಚಿವ ಸುಧಾಕರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ಡಿವಿಜಿ ಸುದ್ದಿ, ಬೆಂಗಳೂರು: ಕನಿಷ್ಠಪಕ್ಷ ಸತ್ಯಗಳನ್ನು ಗಟ್ಟಿಯಾಗಿ ಹೇಳುವ ಧೈರ್ಯ ಕೂಡ  ಕಾಂಗ್ರೆಸ್ ನಾಯಕರಿಗೆ ಇಲ್ಲ. ಇನ್ನು ಅವರದೇ ಪಕ್ಷದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿರಿಗೆ ಕಾಂಗ್ರೆಸ್ ನಾಯಕರಿಂದ ನ್ಯಾಯ ಸಿಗಲು ಹೇಗೆ ಸಾಧ್ಯ ಎಂದು ಶಿಕ್ಷಣ ಸಚಿವ ಸುಧಾಕರ್ ಪ್ರಶ್ನಿಸಿದರು.

ಈ ಬಗ್ಗೆ ಸಚಿವ ಸುಧಾಕರ್ ಟ್ವೀಟ್ ಮೂಲಕ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿದ್ದಾರೆ.  ತನುವಿನ ಕೋಪ ತನ್ನ ಹಿರಿಯತನದ ಕೇಡು, ಮನದ ಕೋಪ ತನ್ನ ಅರಿವಿನ ಕೇಡು, ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು ಕೂಡಲಸಂಗಮದೇವಾ?” ಎಂಬ ಗಾದೆಯ ಮಾತನ್ನು ಹೇಳಿದ್ದಾರೆ.

ಬೆಂಗಳೂರು ಗಲಭೆ ಕಾರಣ ಯಾರು? ಎಂಬ ಸತ್ಯ ಹೊರ ಬರುತ್ತಿದೆ. ಕಾಂಗ್ರೆಸ್ ಕಾರ್ಪೊರೇಟರ್‌ಗಳ ಸಂಪತ್‍ರಾಜ್, ಜಾಕೀರ್ ಅವರು ಇಂದು ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕನಿಷ್ಠಪಕ್ಷ ಸತ್ಯಗಳನ್ನು ಗಟ್ಟಿಯಾಗಿ ಹೇಳುವ ಧೈರ್ಯ ಇಲ್ಲದ ಕಾಂಗ್ರೆಸ್ ನಾಯಕರಿಗೆ ಅದೇ ಪಕ್ಷದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರಿಗೆ ಕಾಂಗ್ರೆಸ್ ನಾಯಕರಿಂದ ನ್ಯಾಯ ಸಿಗಲು ಸಾಧ್ಯವೇ? ಎಂದು ಪ್ರಶ್ನಿಸಿದರು. ಈ ಜಗತ್ತಿನಲ್ಲಿ ಚಿರಕಾಲ ಉಳಿಯುವಂಥದ್ದು ನಯ-ವಿನಯವೇ ಹೊರತು ಮೃಗೀಯತೆಯೂ ಅಲ್ಲ, ದೇಹಬಲವೂ ಅಲ್ಲ. ಸತ್ಯಕ್ಕೆ ಸಾವಿಲ್ಲ ಎಂದಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *