Connect with us

Dvgsuddi Kannada | online news portal | Kannada news online

ಡಿಜೆ ಹಳ್ಳಿ ಗಲಭೆ; ಕಾಂಗ್ರೆಸ್ ನಾಯಕರ ಕೈವಾಡವಿದೆ: ರೋಷನ್ ಬೇಗ್

ಪ್ರಮುಖ ಸುದ್ದಿ

ಡಿಜೆ ಹಳ್ಳಿ ಗಲಭೆ; ಕಾಂಗ್ರೆಸ್ ನಾಯಕರ ಕೈವಾಡವಿದೆ: ರೋಷನ್ ಬೇಗ್

ಡಿವಿಜಿ ಸುದ್ದಿ, ಬೆಂಗಳೂರು: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆಯಲ್ಲಿ ಕೆಲ ಕಾಂಗ್ರೆಸ್ ನಾಯಕರ ಕೈವಾಡವಿದೆ  ಎಂದು ಮಾಜಿ ಸಚಿವ ರೋಶನ್ ಬೇಗ್ ಆರೋಪಿಸಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು,ಗೋರಿ ಪಾಳ್ಯ, ಕಲಾಸಿಪಾಳ್ಯ,  ಟಿಪ್ಪು ನಗರದಿಂದ ಡಿಜೆ ಹಳ್ಳಿಗೆ  ಯಾಕೆ ಬರಬೇಕಿತ್ತು? ಹೊರಗಿನವರು ಬಂದು ದಿಢೀರ್ ಗಲಾಟೆ ಮಾಡಿದರು  ಎಂದು ಸ್ಥಳಿಯರೇ ಹೇಳುತ್ತಿದ್ದಾರೆ.

ಬಂಧಿಸಿದವರಲ್ಲಿ ಕೆಲವರು ಅಮಾಯಕರೂ ಇರಬಹುದು. ಅಂತಹವರನ್ನು ಬಿಡಿ. ತಪ್ಪು ಮಾಡಿದವರಿಗೆ ಮಾತ್ರ ಶಿಕ್ಷೆ ಆಗಲೇಬೇಕು. ಜಮೀರ್ ಅಹ್ಮದ್ ಬಗ್ಗೆ ನಾನು ಜಾಸ್ತಿ ಮಾತಾಡಲ್ಲ. ನಾನು ವಿದ್ಯಾರ್ಥಿ ಹೋರಾಟದಿಂದ ಬಂದ ಸೀನಿಯರ್ ಲೀಡರ್. ಯಡಿಯೂರಪ್ಪನವರು ಸಿಎಂ ಆದರೆ ಜಮೀರ್ ವಾಚ್‍ಮನ್ ಕೆಲಸ ಮಾಡ್ತೀನಿ ಅಂದಿದ್ದ,  ಮೊದಲು ಆ ಕೆಲಸ ಮಾಡಲಿ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top