ಶಿವಮೊಗ್ಗದಲ್ಲಿ ಡಿ.ಕೆ ಶಿವಕುಮಾರ್ ಸಂಚಾರಿ ಕ್ಯಾಂಟೀನ್ ಗೆ ಚಾಲನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಶಿವಮೊಗ್ಗ: ಸಾರ್ವಜನಿಕರ ಅನುಕೂಲಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂಚಾರಿ ಕ್ಯಾಂಟೀನ್ ಆರಂಭಿಸಲಾಗಿದ್ದು, ಈ ಸಂಚಾರಿ ಕ್ಯಾಂಟೀನ್‍ಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇಂದು ಚಾಲನೆ ನೀಡಿದರು.

ಡಿ.ಕೆ.ಶಿವಕುಮಾರ್ ಅವರ ಅಭಿಮಾನಿ ಬಳಗದಿಂದ  ಸಂಚಾರಿ ಕ್ಯಾಂಟೀನ್ ಮೂಲಕ ಹಸಿದವರಿಗೆ ಊಟ ವಿತರಿಸುತ್ತಿದ್ದಾರೆ.ಈ ಸಂಚಾರಿ ಕ್ಯಾಂಟೀನ್ ನಗರದ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಸ್ಟಾಪ್, ನರ್ಸ್, ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳನ್ನು ನೋಡಿಕೊಳ್ಳುವ ಅಟೆಂಡರ್ ಹಾಗೂ ನಗರದಲ್ಲಿ ಆಹಾರಕ್ಕಾಗಿ ಪರಿತಪಿಸುತ್ತಿರುವ ಸಾರ್ವಜನಿಕರ ಅನುಕೂಲಕ್ಕಾಗಿ ಡಿ.ಕೆ.ಶಿ. ಸಂಚಾರಿ ಕ್ಯಾಂಟೀನ್ ಆರಂಭಿಸಲಾಗಿದೆ.

ಪ್ರತಿ ದಿನಕ್ಕೆ 500 ರಿಂದ 600 ಜನರಿಗೆ ಉಪಹಾರ ನೀಡುವ ಯೋಜನೆ ಇದಾಗಿದ್ದು, ಹಸಿದವರಿಗೆ ಈ ಸಂಚಾರಿ ಕ್ಯಾಂಟೀನ್ ಮೂಲಕ ಹೊಟ್ಟೆ ತುಂಬಿಸುವ ಸೇವೆ ಮಾಡಲಾಗುತ್ತಿದೆ.

ಊಟ ಅವಶ್ಯಕವಾಗಿರುವವರು ಒಂದು ಕರೆ ಮಾಡಿದರೆ ಸಾಕು ಉಚಿತವಾಗಿ, ಆಹಾರ ಮತ್ತು ನೀರನ್ನು ಒದಗಿಸುವ ಸೇವೆ ಇಂದಿನಿಂದ ಆರಂಭಿಸಲಾಗಿದೆ. ಜಿಲ್ಲಾ ಕಾಂಗ್ರೆಸ್ ಮುಖಂಡ ದೇವೆಂದ್ರಪ್ಪ ನೇತೃತ್ವದಲ್ಲಿ ಈ ಸಂಚಾರಿ ಕ್ಯಾಂಟೀನ್ ಇಂದಿನಿಂದ ಆರಂಭಗೊಂಡಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *