ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಯಾರನ್ನು ರಕ್ಷಣೆ ಮಾಡಿಲ್ಲ. ಈ ಪ್ರಕರಣವನ್ನು ಸಮಗ್ರ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಮಾಫಿಯಾ ಕೇಸ್ ನಲ್ಲಿ ಇಡೀ ದೇಶದ ಇತಿಹಾಸದಲ್ಲಿ ಮಾದರಿಯಾಗುವಂತೆ ತನಿಖೆ ನಡೆಯುತ್ತಿದೆ. ಈ ಮಾಫಿಯಾ ಕಳೆದ 10 , 15 ವರ್ಷದಿಂದ ಸಕ್ರಿಯವಾಗಿತ್ತು.
ಈ ಹಿಂದೆ ಆಡಳಿತ ನಡೆಸಿದ ಪಕ್ಷಗಳು ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿಲ್ಲ. ಹೀಗಾಗಿ ನಮ್ಮ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಮಗ್ರ ತನಿಖೆ ನಡೆಯಲಿದೆ ಎಂದು ತಿಳಿಸಿದರು.



