Connect with us

Dvgsuddi Kannada | online news portal | Kannada news online

ಡ್ರಗ್ಸ್ ವಿರುದ್ಧ ರಾಜ್ಯವ್ಯಾಪಿ ಸಮರ: ಸಚಿವ ಬಸವರಾಜ ಬೊಮ್ಮಾಯಿ

ಪ್ರಮುಖ ಸುದ್ದಿ

ಡ್ರಗ್ಸ್ ವಿರುದ್ಧ ರಾಜ್ಯವ್ಯಾಪಿ ಸಮರ: ಸಚಿವ ಬಸವರಾಜ ಬೊಮ್ಮಾಯಿ

 ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ ದಂಧೆ ವಿರುದ್ಧ ಸಮರ ರಾಜ್ಯವ್ಯಾಪಿ ನಡೆಯಲಿದ್ದು,  ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿಯಲ್ಲಿ 1,350 ಕೆಜಿ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಈ ಕಾರ್ಯಚರಣೆ ಕಲಬುರಗಿ, ಬೆಂಗಳೂರು ಮತ್ತು ಬೀದರ್ ಪೊಲೀಸರ ಸಹಕಾರದಿಂದ ಯಶಸ್ವಿಯಾಗಿದೆ. ಈ ಕಾರ್ಯಾಚರಣೆ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ತಿಳಿಸಿದರು.

ಡ್ರಗ್ ದಂಧೆ ವಿರುದ್ಧ ಯಾವುದೇ ಮೂಲಗಳಿಂದ ಮಾಹಿತಿ ಬಂದರೂ ಗಂಭೀರವಾಗಿ ಪರಿಗಣಿಸಲು ಪೊಲೀಸರಿಗೆ ಸೂಚಿಸಿದ್ದೇನೆ. ಮಾಧ್ಯಮಗಳಲ್ಲಿ ಬರುವ ಸುದ್ದಿಗಳನ್ನೂ ಪರಿಗಣಿಸುವಂತೆ ಹೇಳಿದ್ದೇನೆ. ಈ ವಿಚಾರದಲ್ಲಿ ಯಾರನ್ನೂ ರಕ್ಷಿಸುವ  ಪ್ರಶ್ನೆ ಇಲ್ಲ ಎಂದರು.

ಈ ದಂಧೆಯಲ್ಲಿ ಯಾವುದೇ ಮೂಲದಿಂದ ಯಾರ ಹೆಸರು ಕೇಳಿ ಬಂದರೂ ತನಿಖೆ ಮಾಡುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಇದರಲ್ಲಿ ಯಾರೇ ಇದ್ದರು ಪೊಲೀಸರು ತನಿಖೆ ಮಾಡುತ್ತಾರೆ. ಡ್ರಗ್ಸ್ ದಂಧೆಯಲ್ಲಿ ಹಣಕಾಸು ಆಯಾಮವೂ ಇದೆ. ದೇಶದ ಹೊರಗೂ ಇವರು ಸಂಬಂಧಗಳನ್ನೂ ಹೊಂದಿರುವ ಶಂಕೆ ಇದೆ.

ಇತರೇ ವ್ಯವಹಾರಗಳನ್ನು ನಡೆಸುವವರ ಜೊತೆ, ಹವಾಲಾ ಸಂಬಂಧವೂ ಇದೆ. ಹೀಗಾಗಿ ಈ ಎಲ್ಲ ಆಯಾಮಗಳನ್ನು ಪೂರ್ಣವಾಗಿ ತನಿಖೆ ನಡೆಸಲು ಇಡಿಯವರು ಬಂದಿದ್ದಾರೆ. ಈ ಪ್ರಕರಣದಲ್ಲಿ ಇಡಿಯವರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top