ಡಿವಿಜಿ ಸುದ್ದಿ, ದಾವಣಗೆರೆ: ನಾಳೆ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಜಿಲ್ಲಾ ಪ್ರವಾಸ ಕೈಗೊಳ್ಳವರು.

ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು 10.30 ಕ್ಕೆ ದಾವಣಗೆರೆ ಪ್ರವಾಸಿ ಮಂದಿರಕ್ಕೆ (ಸಕ್ರ್ಯೂಟ್ ಹೌಸ್) ಆಗಮಿಸುವರು. 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಜನಪ್ರತಿನಿದಿಗಳೊಂದಿಗೆ ಸಭೆ ನಡೆಸುವರು.
ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್-19ಗೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸುವರು. ಬಳಿಕ 1 ಗಂಟೆಗೆ ಡಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ 3 ಗಂಟೆಗೆ ಬೆಂಗಳೂರಿಗೆ ಹೊರಡುವರು ಎಂದು ಪ್ರಕಟಣೆ ತಿಳಿಸಿದೆ.



