ಡಿವಿಜಿ ಸುದ್ದಿ, ಬೆಂಗಳೂರು: ಅತೀ ಶೀಘ್ರವೇ PUC, SSLC ಮಂಡಳಿ ವಿಲೀನವಾಗಲಿದ್ದು, ಎರಡು ಮಂಡಳಿಗಳನ್ನು ಒಂದೇ ಮಂಡಳಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, PUC, SSLC ಬೋರ್ಡ್ ಎರಡನ್ನು ವಿಲೀನ ಮಾಡಲು ಸರ್ಕಾರದ ನಿರ್ಧರಿಸಿದೆ. ಪ್ರಾಥಮಿಕ ಶಿಕ್ಷಣ ಪರಿಷತ್ ಅನ್ನು ಶಿಕ್ಷಣ ಇಲಾಖೆಯಲ್ಲಿ ಪ್ರಾರಂಭ ಮಾಡುತ್ತೇವೆ. ಸ್ವಾಭಿಮಾನಿ ಸರ್ಕಾರಿ ಶಾಲೆಯಾಗಿ ಸರ್ಕಾರಿ ಶಾಲೆಗಳನ್ನ ಅಭಿವೃದ್ಧಿ ಮಾಡುತ್ತೇವೆ. ಉತ್ತಮ ಶಿಕ್ಷಕರಿಗೆ ವಿಶೇಷ ಪ್ರಶಸ್ತಿ ನೀಡುವ ಕೆಲಸವನ್ನು ಇಲಾಖೆ ಮಾಡುತ್ತದೆ ಎಂದರು.

ನಾನು ಶಿಕ್ಷಣ ಇಲಾಖೆಯ ಸಚಿವನಾಗಿ ಒಂದು ವರ್ಷ ಪೂರ್ಣಗೊಂಡಿದ್ದು,ಇದು ಸವಾಲಿನ ವರ್ಷವಾಗಿತ್ತು. ಪ್ರಾರಂಭದಲ್ಲೇ ಪ್ರವಾಹದಿಂದ ಶಾಲಾ ಕಟ್ಟಡಗಳು ಬಿದ್ದು ಹೋದವು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಆರ್ಥಿಕ ಶಕ್ತಿ ನೀಡಿದರು. ಇದನ್ನು ನಿವಾರಿಸಿಕೊಳ್ಳುವಷ್ಟರಲ್ಲಿ ಕೊರೊನಾ ಸೋಂಕಿನ ಭೀತಿ ದೊಡ್ಡ ಸವಾಲಗಿ ಪರಿಣಮಿಸಿದೆ.
ಕೊರೊನಾ ಕಾರಣದಿಂದ ಶಾಲೆ ಯಾವಾಗ ಪ್ರಾರಂಭ ಮಾಡುವುದು ಎಂಬು ಇನ್ನು ನಿರ್ಧಾರವಾಗಿಲ್ಲ. PUC, SSLC ಪರೀಕ್ಷೆಯನ್ನು ಕೋವಿಡ್ ಸಮಯದಲ್ಲೇ ಯಶಸ್ವಿಯಾಗಿ ನಡೆಸಿದ್ದೇವೆ. ಇದಕ್ಕೆ ಮುಖ್ಯಮಂತ್ರಿಗಳ ಸಹಕಾರ, ಧೈರ್ಯ ಕಾರಣ. ಆದರೆ, ಈಗ ನೀಟ್, ಜೆಇಇ ಪರೀಕ್ಷೆ ಬೇಡ ಎನ್ನುವರರು ನಮ್ಮ ಎಸ್ಎಸ್ಎಲ್ಸಿ ಪರೀಕ್ಷೆ ಕಡೆ ಒಮ್ಮೆ ನೋಡಲಿ ಎಂದರು.

ಶಿಕ್ಷಕೆ ವರ್ಗಾವಣೆ ಸಮಸ್ಯೆಗೆ ಹೊಸ ಕಾನೂನು ಜಾರಿಗೆ ತಂದಿದ್ದೇನೆ. ಸೆಪ್ಟೆಂಬರ್ ನಲ್ಲಿ ಶಿಕ್ಷಣ ವರ್ಗಾವಣೆ ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ. ಶಿಕ್ಷಣ ತಜ್ಞರ ಮಾರ್ಗದರ್ಶನದಲ್ಲಿ ವಿದ್ಯಾಗಮ ಕಾರ್ಯಕ್ರಮ ಜಾರಿಗೆ ತಂದಿದ್ದು, ಈ ವರ್ಷ 1 ಸಾವಿರ ಉಭಯ ಮಾಧ್ಯಮಗಳ ತರಗತಿ ಪ್ರಾರಂಭ ಮಾಡುತ್ತೇವೆ. ಹೊಸ ಶಿಕ್ಷಣ ನೀತಿ ಜಾರಿಗೆ ಬಂದಿದ್ದು, ಇದನ್ನು ರಾಜ್ಯದಲ್ಲಿ ಜಾರಿ ಮಾಡುತ್ತೇವೆ ಎಂದರು.



