Connect with us

Dvgsuddi Kannada | online news portal | Kannada news online

ಡಿಜೆ ಹಳ್ಳಿ ಗಲಭೆ:110 ಮಂದಿ ಗಲಭೆಕೋರರ ಬಂಧನ

ಪ್ರಮುಖ ಸುದ್ದಿ

ಡಿಜೆ ಹಳ್ಳಿ ಗಲಭೆ:110 ಮಂದಿ ಗಲಭೆಕೋರರ ಬಂಧನ

ಡಿವಿಜಿ ಸುದ್ದಿ, ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆ ಸಂಬಂಧ ರಾತ್ರಿಯಿಡಿ ಕಾರ್ಯಾಚರಣೆ ನಡೆಸಿದ ಬೆಂಗಳೂರು ಪೊಲೀಸರು, 110 ಮಂದಿಯನ್ನು ಬಂಧಿಸಿದ್ದಾರೆ.

ಗಲಭೆ ಸೃಷ್ಟಿಸಿ ವಾಹನಗಳಿಗೆ ಬೆಂಕಿ ಹಚ್ಚಿ, ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳ ಪತ್ತೆಗೆ  ವಿಶೇಷ ತಂಡ ರಚಿಸಲಾಗಿತ್ತು. ಬೆಳಿಗ್ಗೆ 10 ಗಂಟೆಯವರಗೆ ಒಟ್ಟು 110 ಆರೋಪಿಗಳನ್ನು ಬಂಧಿಸಲಾಗಿದೆ.  ಗಲಭೆ ಸಂಬಂಧ 110 ಮಂದಿಯನ್ನು ಬಂಧಿಸಲಾಗಿದೆ.  ಹಲವರು ತಲೆಮರೆಸಿಕೊಂಡಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಸಿಸಿಬಿ ಜಂಟಿ‌ ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

dj halli 3

ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದಾನೆ ಎನ್ನಲಾದ ಆರೋಪಿ ನವೀನ್‌ನನ್ನು ಪೊಲೀಸರು ಮಂಗಳವಾರ ತಡರಾತ್ರಿಯೇ ಬಂಧಿಸಿದ್ದಾರೆ.ಬಂಧಿತ ಆರೋಪಿ ನವೀನ್, ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಮೂರ್ತಿ ಅವರ ಸಹೋದರಿಯ ಮಗನೆಂದು ಗೊತ್ತಾಗಿದೆ.

ಮಂಗಳವಾರ ಬೆಳಿಗ್ಗೆಯೇ ಆರೋಪಿ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದ. ಅದನ್ನು ನೋಡಿದ್ದ ಜನ, ಠಾಣೆಗೆ ದೂರು ನೀಡಲು ಹೋಗಿದ್ದರು. ಕೆಲವರು, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೂ ತೆರಳಿದ್ದರು. ಎರಡು ಕಡೆಯೂ ಕೆಲ ಕಿಡಿಗೇಡಿಗಳು, ಮನೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದ್ದರು‌.

dj halli 2

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top