Connect with us

Dvgsuddi Kannada | online news portal | Kannada news online

ಡ್ರಗ್ಸ್  ಪ್ರಕರಣದಲ್ಲಿ ಚಿರು ಹೆಸರು ಹೇಳಿದ್ದು ತುಂಬಾ ಬೇಸರವಾಯಿತು: ನಟ ದರ್ಶನ್

ಸಿನಿಮಾ

ಡ್ರಗ್ಸ್  ಪ್ರಕರಣದಲ್ಲಿ ಚಿರು ಹೆಸರು ಹೇಳಿದ್ದು ತುಂಬಾ ಬೇಸರವಾಯಿತು: ನಟ ದರ್ಶನ್

ಡಿವಿಜಿ ಸುದ್ದಿ, ದಾವಣಗೆರೆ: ಡ್ರಗ್ಸ್ ವಿಚಾರದಲ್ಲಿ ನಟ ಚಿರಂಜೀವಿ ಸರ್ಜಾ  ಹೆಸರು ಹೇಳಿದ್ದು ನನಗೆ ತುಂಬಾ ಬೇಸರವಾಯಿತು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದರು.

ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ನಗರದ ಬಾಪೂಜಿ ಗೆಸ್ಟ್ ಹೌಸ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರನ್ನು ಹೇಳುತ್ತಿರುವುದು ನನಗೆ ತುಂಬಾ ಬೇಸರವಾಯಿತು. ಚಿರು ಸತ್ತು ಮೂರು ತಿಂಗಳು ಆಗಿದೆ. ಅವನು ಎಲ್ಲಿದ್ದಾನೋ, ಹೇಗಿದ್ದಾನೋ ಗೊತ್ತಿಲ್ಲ. ಸಾಬೀತು ಆದ್ರೆ ಶಿಕ್ಷೆ ಕೊಡಲು ಆಗುತ್ತಾ?  ದಯವಿಟ್ಟು ಕೆಟ್ಟದಂತೂ ಮಾತನಾಡಬೇಡಿ ಎಂದು ದರ್ಶನ್ ಮನವಿ ಮಾಡಿಕೊಂಡರು.

darshan

ಒಂದು ಕ್ಲಾಸ್ ಎಂದ ಮೇಲೆ ಫಸ್ಟ್ ರ‍್ಯಾಂಕ್ ವಿದ್ಯಾರ್ಥಿ ಇರುತ್ತಾರೆ. ಲಾಸ್ಟ್ ಬೆಂಚ್ ಸ್ಟೂಡೆಂಟ್ ಕೂಡ ಇರುತ್ತಾರೆ. ಅದಕ್ಕೆ ಇಡೀ ಕ್ಲಾಸ್ ಜಿರೋ ಅನ್ನೊದಕ್ಕೆ ಆಗಲ್ಲ. ಅದೇ‌‌ ರೀತಿ  ಸ್ಯಾಂಡಲ್‍ವುಡ್ ನಲ್ಲಿಯೇ ಡ್ರಗ್ಸ್ ಮಾಫಿಯಾ ನಡೆಯುತ್ತಿದೆ ಎಂದರೆ ತಪ್ಪಾಗುತ್ತೆ ಎಂದರು.

ನಾನು ಈ ಫೀಲ್ಡ್‌ಗೆ ಬಂದು 28 ವರ್ಷ ಆಯಿತು. ಲೈಟ್ ಬಾಯ್‍ಯಿಂದ ಇಲ್ಲಿವರೆಗೂ ಬಂದಿದ್ದೇನೆ. ಆದರೆ ಇದುವರೆಗೂ ನಮಗೆ ಈ ಅನುಭವ ಆಗಿಲ್ಲ. ಈ ಬಗ್ಗೆ ನಾನು ಕೇಳಿಲ್ಲ ನೋಡಿಲ್ಲ. ಡ್ರಗ್ಸ್ ಕೇಸ್ ಇಡೀ ಸ್ಯಾಂಡಲ್‍ವುಡ್‍ಗೆ ಮಾತ್ರ ಅಲ್ಲ. ಕರ್ನಾಟಕಕ್ಕೆ ಕೆಟ್ಟ ಹೆಸರು ಎಂದರು.ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜಾದು ನೋಡೋಣ, ಸ್ಯಾಂಡಲ್‍ವುಡ್‍ನಲ್ಲಿ ಮಾತ್ರ ಅಲ್ಲ, ಎಲ್ಲಾ ಕಡೆ ಇರಬಹುದು ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಸಿನಿಮಾ

ದಾವಣಗೆರೆ

Advertisement
Advertisement Enter ad code here

Title

To Top