ಡಿವಿಜಿ ಸುದ್ದಿ, ಹರಪನಹಳ್ಳಿ: ಉಚ್ಚಂಗಿದುರ್ಗದ ಗ್ರಾಮ ಪಂಚಾಯತಿಯ ನೂತನ ಉಪಾಧ್ಯಕ್ಷರಾಗಿ ಬೇವಿನಹಳ್ಳಿ ಕರಿಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಉಪಾಧ್ಯಕ್ಷರಾಗಿದ್ದ ಪೂಜಾರಿ ತಿರುಕಮ್ಮ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಕರಿಯಪ್ಪ ಒಬ್ಬರು ಮಾತ್ರ ನಾಮ ಪತ್ರ ಸಲ್ಲಿಸಿದ್ದರು. ಇದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಚುನಾವಣಾ ಅಧಿಕಾರಿ ಅನಂತರಾಜು ತಿಳಿಸಿದರು.