ಹರಪನಹಳ್ಳಿ  ಜಿಲ್ಲೆ ಕೇಂದ್ರವನ್ನಾಗಿ ಘೋಷಿಸಲು ಕರ್ನಾಟಕ ಜನಶಕ್ತಿ ಒತ್ತಾಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ, ಹರಪನಹಳ್ಳಿ: ಬಳ್ಳಾರಿ ಜಿಲ್ಲೆ ವಿಭಜನೆ  ಮಾಡುವುದಾರೆ,  ಹರಪನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಕರ್ನಾಟಕ ಜನ ಶಕ್ತಿ ಸಂಘಟನೆ ಆಗ್ರಹಿಸಿದೆ.

ಪಟ್ಟಣದ ಹರಿಹರ ರಸ್ತೆಯಿಂದ  ಪ್ರತಿಭಟನಾ ಮೆರವಣಿಗೆ ನಡೆಸಿದ ಸಂಘಟನೆ ಕಾರ್ಯಕರ್ತರು, ಮಿನಿ ವಿಧಾನಸೌಧದಲ್ಲಿ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿಸಲ್ಲಿಸಿದರು. ನಂತರ  ಮಾತನಾಡಿದ ಸಂಘಟನಕಾರರು,. ಬಳ್ಳಾರಿ ಜಿಲ್ಲೆಗೆ ಸರ್ಕಾರಿ ಕೆಲಸಗಳಿಗೆ ಹರಪನಹಳ್ಳಿ ತಾಲೂಕಿನ ಗಡಿಭಾಗದಿಂದ  ಹೋಗಬೇಕಾದರೆ ಒಂದು ದಿನ ಬೇಕಾಗುತ್ತದೆ.

ಜನರಿಗೆ ಸಂಚಾರಿಸುವುದಕ್ಕೆ ತುಂಬಾ ತೊಂದರೆ ಆಗುತ್ತಿದೆ.  ಹೀಗಾಗಿ ಬಳ್ಳಾರಿ ಜಿಲ್ಲೆ ವಿಭಜನೆ ಮಾಡುವುದಾದರೆ, ವಿಸ್ತಾರವಾದ ಹರಪನಹಳ್ಳಿ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು  ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಜನಶಕ್ತಿ  ತಾಲೂಕು ಅಧ್ಯಕ್ಷ ಮಾರುತಿ, ರಂಗಪುರದ ಮಾರುತಿ, ಹನುಮಂತಪ್ಪ, ಮಂಜುಳಾ, ಮಂಜಣ್ಣ, ರಾಜು, ಕಲಿಂ, ಟಿ.ಬಸವರಾಜ್,  ಹನುಮಕ್ಕ, ನಾಗರಾಜ್ ಆಶಾ, ಸ್ವಾಮಿ ಮತ್ತಿತರರು ಇದ್ದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *