Connect with us

Dvgsuddi Kannada | online news portal | Kannada news online

ಹೊಸಪೇಟೆ ಜಿಲ್ಲಾ ಕೇಂದ್ರ  ಆಗೋದಕ್ಕೆ ನಾವು ಬಿಡಲ್ಲ: ಪಿ.ಟಿ. ಪರಮೇಶ್ವರ ನಾಯ್ಕ

ಹರಪನಹಳ್ಳಿ

ಹೊಸಪೇಟೆ ಜಿಲ್ಲಾ ಕೇಂದ್ರ  ಆಗೋದಕ್ಕೆ ನಾವು ಬಿಡಲ್ಲ: ಪಿ.ಟಿ. ಪರಮೇಶ್ವರ ನಾಯ್ಕ

ಡಿವಿಜಿಸುದ್ದಿ.ಕಾಂ, ಹರಪನಹಳ್ಳಿ: ಯಾವುದೇ ಕಾರಣಕ್ಕೂ ಹೊಸಪೇಟೆ ಜಿಲ್ಲೆಯನ್ನಾಗಿ ಮಾಡುವುದಕ್ಕೆ ನಾವು ಬಿಡುವುದಿಲ್ಲ. ಬಿಜೆಪಿ ಸರ್ಕಾರದ ನಿಲುವಿಗೆ ನಮ್ಮ  ವಿರೋಧವಿದೆ ಎಂದು ಹೂವಿನ ಹಡಗಲಿ  ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಹೇಳಿದರು.

ಬಳ್ಳಾರಿ ಜಿಲ್ಲೆ ವಿಭಜನೆಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರ, ಹೊಸಪೇಟೆ ಜಿಲ್ಲಾ ಕೇಂದ್ರ ಮಾಡಲು ಚಿಂತನೆ ನಡೆಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಬಳ್ಳಾರಿ ಜಿಲ್ಲೆಯ ಎಲ್ಲಾ ಶಾಸಕರ ಸಂಸದರ, ವಿರೋಧವಿದೆ.  ಅಖಂಡ ಬಳ್ಳಾರಿ ಜಿಲ್ಲೆಯೇ ಮುಂದುವರೆಯಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಒಂದು ವೇಳೆ ಹೊಸ ಜಿಲ್ಲಾ ಮಾಡುವ ಉದ್ದೇಶವಿದ್ದರೆ  ಹರಪನಹಳ್ಳಿ, ಹೂವಿನ ಹಡಗಲಿ, ಹಗರಿಬೊಮ್ಮನಹಳ್ಳಿ ಮೂರು ತಾಲೂಕು ಒಳಗೊಂಡಂತೆ  ಜಿಲ್ಲೆಯನ್ನಾಗಿ ಘೋಷಿಸಬೇಕು.  ಅದರಲ್ಲೂ  ಮೊದಲು ಹೂವಿನ ಹಡಗಲಿ ಜಿಲ್ಲೆಯಾಗಲಿ ಎಂದರು.

ದ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್  ಮಾಡುತ್ತಿದೆ. ಕೇಂದ್ರ ಸರ್ಕಾರದ ಉದ್ದೇಶ ಕಾಂಗ್ರೆಸ್ ನಾಯಕರನ್ನು ಹೆದರಿಸೋದು ಮತ್ತು ರಾಜಕೀಯವಾಗಿ ಅವರನ್ನು ಮುಗಿಸುವುದಾಗಿದೆ.  ಹೀಗಾಗಿ ಕಾಂಗ್ರೆಸ್ ಪ್ರಭಾವಿ ನಾಯಕರ ವಿರುದ್ಧ ಮಾತ್ರ ಐಟಿ, ಇಡಿ, ಸಿಬಿಐ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು  ತನಿಖೆ ನಡೆಸುತ್ತಿದ್ದಾರೆ ಎಂದು ದೂರಿದರು.

 

.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

ದಾವಣಗೆರೆ

Advertisement
Advertisement Enter ad code here

Title

To Top