ಬಡವರಿಗೆ ಆಹಾರ ಕಿಟ್ ವಿತರಿಸಿದ ಶಾಸಕ ಎಸ್.ವಿ. ರಾಮಚಂದ್ರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಹರಪನಹಳ್ಳಿ: ತಾಲ್ಲೂಕಿನ ಅರಸೀಕೆರೆ ಬ್ಲಾಕ್ ನ  ಗ್ರಾಮ ಪಂಚಾಯತಿ, ಪೊಲೀಸ್ ಇಲಾಖೆ, ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟರೈಸ್ ಹಾಗೂ ಬಡವರಿಗೆ ಆಹಾರ ಕಿಟ್ ಅನ್ನು ಶಾಸಕ ಎಸ್.ವಿ. ರಾಮಚಂದ್ರ  ವಿತರಿಸಿದರು.

ಲಾಕ್ ಡೌನ್ ನಿಂದ ಬಡವರಿಗೆ ಉಂಟಾಗಿರುವ ಸಂಕಷ್ಟ ನಿವಾರಣೆಗೆ ಶಾಸಕರು ಮುಂದಾಗಿದ್ದು, ಸಂಸದ ಜಿ. ಎಂ. ಸಿದ್ದೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸಹಯೋಗದೊಂದಿಗೆ  ಬಡವರಿಗೆ  ಆಹಾರ ಕಿಟ್ ವಿತರಿಸಿದ್ದಾರೆ.  ಉಚ್ಚಂಗಿದುರ್ಗ, ಚಟ್ನಿಹಳ್ಳಿ, ಅಣಜಿಗೆರೆ, ಅರಸೀಕೆರೆ, ಹೊಸಕೋಟೆ, ತವಡೂರು, ಪುಣಭಗಟ್ಟ ಪಂಚಾಯತಿ ವ್ಯಾಪ್ತಿಯ ಬಡ ಕುಟುಂಬದ ಅರ್ಹ ಫಲಾನುಭವಿಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಗಳೂರು ತಹಶೀಲ್ದಾರ್ ಹುಲ್ಲುಮನೆ ತಿಮ್ಮಣ್ಣ, ಇಓ ಅನಂತರಾಜು, ಉಪ ತಹಶೀಲ್ದಾರ್ ಫಾತಿಮಾ, ಜಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಪಲ್ಲಗಟ್ಟೆ ಮಹೇಶ್, ಕಂದಾಯ ನಿರೀಕ್ಷಕ ಶ್ರೀಧರ್, ಸಹಾಯಕ ಸಬ್ ಇನ್ಸ್ಪೆಕ್ಟರ್ ಕೊಟ್ರಯ್ಯ, ಮುಖಂಡರಾದ ಚಟ್ನಿಹಳ್ಳಿ ರಾಜಪ್ಪ, ವೈ.ಡಿ ಅಣ್ಣಪ್ಪ, ಫಣಿಯಾಪುರ ಲಿಂಗರಾಜ, ಬಾಲೆನಹಳ್ಳಿ ಕೆಂಚನಗೌಡ, ಪರಶುರಾಮಪ್ಪ ಅವರು ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *