Connect with us

Dvgsuddi Kannada | online news portal | Kannada news online

ಹರ ಜಾತ್ರಾ ಮಹೋತ್ಸವ, ಬೆಳ್ಳಿ ಬೆಡಗು ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಗೆ ಆಹ್ವಾನ

ರಾಜ್ಯ ಸುದ್ದಿ

ಹರ ಜಾತ್ರಾ ಮಹೋತ್ಸವ, ಬೆಳ್ಳಿ ಬೆಡಗು ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಗೆ ಆಹ್ವಾನ

ಡಿವಿಜಿ ಸುದ್ದಿ,ಹರಿಹರ: ಹರಿಹರದ ವೀರಶೈವ ಪಂಚಮಸಾಲಿ ಸಮಾಜದ ‘ಹರ ಜಾತ್ರಾ ಮಹೋತ್ಸವ’ ಮತ್ತು ರಾಜ್ಯ ಪಂಚಮಸಾಲಿ ಸಂಘದ ‘ಬೆಳ್ಳಿ ಬೆಡಗು’ ಹಬ್ಬಕ್ಕೆ ಬರುವಂತೆ  ಪೀಠಾಧ್ಯಕ್ಷ ಶ್ರೀ ವಚನನಾಂದ ಸ್ವಾಮೀಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದರು.

hara dvgsuddi

ಗುರುವಾರ ನವದೆಹಲಿಯಲ್ಲಿ ಪ್ರಧಾನಿ ಕಚೇರಿಯಲ್ಲಿ ಭೇಟಿಯಾದ ಶ್ರೀಗಳು ಕಾರ್ಯಕ್ರಮಕ್ಕೆ  ಆಹ್ವಾನ ನೀಡಿದರು. ಶ್ರೀಗಳು  ಕಚೇರಿಗೆ ಬರುವ ವಿಷಯ ತಿಳಿದು ಪ್ರಧಾನಿ ಮೋದಿ ಸ್ವಾಗತಿಸಿದರು. ಈ ವೇಳೆ ಶ್ರೀಗಳ ಯೋಗಾಸನ ಪ್ರಚಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹರ ಜಾತ್ರಾ ಮಹೋತ್ಸವಕ್ಕೆ ಬರುವ ಬಗ್ಗೆ ತಿಳಿಸುವುದಾಗಿ ಹೇಳಿದರು.

hara3 dvgsuddi

 

ಜನವರಿ 13, 14 ರಂದು ಹರಿಹರದ ಹರ ಪೀಠದಲ್ಲಿ ಕಾರ್ಯಕ್ರಮ ಜರುಗಲಿದೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ  ಪ್ರಹ್ಲಾದ್  ಜೋಶಿ,ಸಂಸದ ಜಿ.ಎಂ.ಸಿದ್ಧೇಶರವರು, ಮುರುಗೇಶ ನಿರಾಣಿ, ಪೀಠದ ಧರ್ಮದರ್ಶಿ ಬಿ.ಸಿ.ಉಮಾಪತಿ ಹಾಗೂ ರಾಜ್ಯ ಪಂಚಮಸಾಲಿ ಸಂಘದ ರಾಜ್ಯಾಧ್ಯಕ್ಷ ಬಿ.ನಾಗನಗೌಡರು ಉಪಸ್ಥಿತರಿದ್ದರು.

hara2 dvgsuddi

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top