ಮೀಸಲಾತಿ ಹೆಚ್ಚಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ: ವಾಲ್ಮೀಕಿ ಶ್ರೀ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ.ಕಾಂ, ಹರಿಹರ: ನ್ಯಾ.ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಮೀಸಲಾತಿ ಹೆಚ್ಚಿಸಲು ಸಮಿತಿ ರಚಿಸಲಾಗಿದ್ದು, ವರದಿ ಅನ್ವಯ ಮೀಸಲಾತಿ ಹೆಚ್ಚಿಸುತ್ತೆವೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಹನಗವಾಡಿ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ತೋತ್ಸವದ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಅದಿಕವಿ ಮಹರ್ಷಿ ವಾಲ್ಮೀಕಿ ಅವರು ರಾಮಾಯಣದಂತಹ ಮಹಾಕಾವ್ಯವನ್ನು ರಚಿಸುವುದರ ಮೂಲಕ
ದೇಶಕ್ಕೆ ಭಾರತದ ಸಂಸ್ಕೃತಿಯನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತಾಗಿದೆ ಎಂದರು.

nayaka community dvgsuddi 2

ಮಹಾತ್ಮರಿಗೆ ಜಾತಿ ಇಲ್ಲ. ಜಾತಿಯಿಂದ ಯಾವ ಮಹಾತ್ಮರನ್ನು ನೋಡಬಾರದು. ಮರಳಸಿದ್ಧರು, ಬಸವಣ್ಣನವರು, ಕನಕಸದಾಸರ ಸಂದೇಶ, ಕಿರ್ತನೆಗಳು ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅವರ ಆದರ್ಶಗಳು, ತತ್ವಗಳು ಮಾನವನ ಬದುಕಿಗೆ ಬೆಳಕಾಗಿದೆ ಎಂದರು.

ವಾಲ್ಮೀಕಿ ಜಯಂತಿ ಆಚರಿಸುವುದರ ಜೊತೆಗೆ ಸರ್ಕಾರಿ ರಜೆ ಘೋಷಿಸಿದ ಕಿರ್ತಿ ಬಿಎಸ್ ವೈಗೆ ಸಲ್ಲುತ್ತದೆ. ನಮ್ಮ ಹಕ್ಕು ಪಡೆಯಲು ರಾಜನಹಳ್ಳಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮೂಲಕ ಮೀಸಲಾತಿ ಹೆಚ್ಚಿಸಲು ಎಲ್ಲಾ ಸಮಾಜದವರು ಅಭೂತಪೂರ್ವ ಬೆಂಬಲ ನೀಡಿದರು ಎಂದು ತಿಳಿಸಿದರು.

ಜಯಂತಿ ನೆಪದಲ್ಲಿ ಮೆರವಣಿಗೆ ಮಾಡುವುದರ ಮೂಲಕ ಕುಡಿದು ಕುಣಿಯುವುದು ಬಹುತೇಕ ಕಡೆ ಕೇಳಿ ಬರುತ್ತಿರುವುದು ಬೇಸರದ ಸಂಗತಿ. ಇದರಿಂದ ಇಂದಿನ ಯುವ ಪೀಳಿಗೆ ದುಚ್ಚಟಗಳಿಗೆ ದಾಸರಾಗಿಮಾಡಿಕೊಳ್ಳುತ್ತಿದ್ದಾರೆ, ಯುವಕರು ದುಶ್ಚಟಗಳನ್ನು ಬಿಟ್ಟು ಒಳ್ಳೆಯ ಜೀವನ ನಡೆಸಿ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಬಿ.ಪಿ. ಹರೀಶ್, ಹೆಚ್.ಎಸ್.ಶಿವಶಂಕರ್, ಜಿ.ಪಂ. ಮಾಜಿ ಅಧ್ಯಕ್ಷ ವೀರೇಶ್ ಹನಗವಾಡಿ, ನಗರಸಭಾ ಸದಸ್ಯ ದಿನೇಶ್ ಬಾಬು, ಬಿಜೆಪಿ ಮುಖಂಡ ರಾಜನಹಳ್ಳಿ ಶಿವಕುಮಾರ್, ವಾಲ್ಮೀಕಿ ಸಮಾಜದ ನಗರ ಘಟಕ ಅಧ್ಯಕ್ಷ ಕೆ.ಬಿ. ಮಂಜುನಾಥ್, ಆನಂದಪ್ಪ, ಜಿ.ಮಂಜುನಾಥ್ ಪಟೇಲ್, ಮಾರುತಿ ಬೇಡರ್, ದಾವಣಗೆರೆ ಸಿಪಿಐ ಮಂಜುನಾಥ್ ನಾಲವಾಗಲು, ಡಿ.ವೈ. ಇಂದಿರಾ ಮಂಜುನಾಥ್, ಯಕ್ಕನಹಳ್ಳಿ ಬಸವರಾಜಪ್ಪ ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *