ಡಿವಿಜಿ ಸುದ್ದಿ, ಹಾವೇರಿ: ನಾನು ಪಕ್ಷದಲ್ಲಿ ಹಿರಿಯ ನಾಯಕ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿಯ ಹಾವೇರಿ ಶಾಸಕ ನೆಹರು ಓಲೇಕಾರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳನ್ನ ಹಿರಿಯರು ಶಮನ ಮಾಡುತ್ತಾರೆ. ನಾನು ಪರಿಶಿಷ್ಠ ಜಾತಿಯ ಬಲಗೈ ಮುಖಂಡ. ರಾಜ್ಯದಲ್ಲಿ ಬಲಗೈ ಸಮುದಾಯಕ್ಕೆ ಇದುವರೆಗೂ ಸಚಿವ ಸ್ಥಾನ ಸಿಕ್ಕಿಲ್ಲ. ಮುಖ್ಯಮಂತ್ರಿಗಳು ನಮ್ಮ ಸಮುದಾಯಕ್ಕೆ ಅವಕಾಶ ನೀಡುತ್ತೇನೆ ಎಂದು ಹೇಳಿದ್ದಾರೆ.
ಅಧಿಕಾರ ಬೇಕೆಂದಾಗ ಭಿನ್ನಾಭಿಪ್ರಾಯ ಉಂಟಾಗೋದು ಸಹಜ. ತಮಗೆ ಸಚಿವ ಸ್ಥಾನ ನೀಡಲಿಲ್ಲ ಅಂದ್ರೆ ಯಡಿಯೂರಪ್ಪನವರನ್ನು ಕೆಳಗೆ ಇಳಿಸ್ತೀವಿ ಅಂತಾ ಕೆಲವರು ಆಂತರಿಕವಾಗಿ ಹೇಳುತ್ತಾರೆ. ಆದರೆ, ಯಾರು ಅದನ್ನು ಬಹಿರಂಗವಾಗಿ ಹೇಳುತ್ತಿಲ್ಲ. ಹಿರಿಯ ನಾಯಕರಿಗೆ ಸಂಪುಟದಲ್ಲಿ ಸ್ಥಾನ ನೀಡಿ, ಅಸಮರ್ಥರನ್ನು ಕೈಬಿಡಬೇಕು. ಮುಂದಿನ ದಿನಗಳಲ್ಲಿ ಉಮೇಶ್ ಕತ್ತಿಯವರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.



