Connect with us

Dvgsuddi Kannada | online news portal | Kannada news online

ಎಸ್ ಎಸ್ ಎಲ್ ಸಿ ಪರೀಕ್ಷೆ: ನಕಲು ಯತ್ನ; ಐವರ ವಿರುದ್ಧ ಎಫ್ ಐಆರ್

ಕ್ರೈಂ ಸುದ್ದಿ

ಎಸ್ ಎಸ್ ಎಲ್ ಸಿ ಪರೀಕ್ಷೆ: ನಕಲು ಯತ್ನ; ಐವರ ವಿರುದ್ಧ ಎಫ್ ಐಆರ್

ಡಿವಿಜಿ ಸುದ್ದಿ, ಹಿರೇಕೆರೂರ: ತಾಲ್ಲೂಕಿನ ಸಂಗಮೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಿಸಲು ಪ್ರಯತ್ನ ಮಾಡಿದ ಆರೋಪದ ಮೇಲೆ ನಾಲ್ವರು ಶಿಕ್ಷಕರು ಸೇರಿದಂತೆ ಐವರ ವಿರುದ್ಧ ಎಫ್ ಐಆರ್  ಪ್ರಕರಣ ದಾಖಲಾಗಿದೆ.

ಶಿಕ್ಷಕರಾದ ಜಗದೀಶ ಶಿವಪ್ಪ, ಮನೋಹರ ಬಿ.ಆರ್, ಗುತ್ತೆಪ್ಪ ಬಾಳಂಬೀಡ, ಶಿವಯೋಗಿ ರಾಗಿ ಅವರನ್ನು ಬಂಧಿಸಲಾಗಿದೆ. ಈ ನಾಲ್ವರು ಶಿಕ್ಷಕರು ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದಲ್ಲಿ ಇರಲಿಲ್ಲ.

ಈ ಬಗ್ಗೆ  ತಹಶೀಲ್ದಾರ್‌ ಆರ್‌.ಎಚ್‌. ಭಾಗವಾನ್‌ ಮಾಹಿತಿ ನೀಡಿದ್ದು,  ನಾನು ದಿಢೀರ್‌ ಭೇಟಿ ನೀಡಿದ ಸಂದರ್ಭದಲ್ಲಿ ಓಡಿ ಹೋಗಲು ಯತ್ನಿಸಿದರು.  ತಡೆದು ವಿಚಾರಣೆ ನಡೆಸಿದಾಗ, ಅವರ ಬಳಿ ನಕಲು ಚೀಟಿಗಳು ಪತ್ತೆಯಾಗಿವೆ. ಹೀಗಾಗಿ  ಪೊಲೀಸರ ವಶಕ್ಕೆ ಒಪ್ಪಿಸಿದ್ದೇನೆ. ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ ನಾಗರಾಜ ಸುಂಕಾಪುರ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top