ಮೋದಿ ಅವರೇ ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ?’ : ಸರಣಿ ಟ್ವೀಟ್ ಮೂಲಕ ಕುಟುಕಿದ ಎಚ್ ಡಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ಬೆಂಗಳೂರು: ಪ್ರಧಾನಿ ನರೇಂದ್ರಮೋದಿ ನಿನ್ನೆ ತುಮಕೂರಿನ ಕಾರ್ಯಕ್ರಮದಲ್ಲಿ ವಿಶ್ವ ಸಂಸ್ಥೆಯಲ್ಲಿ ಪಾಕಿಸ್ತಾನ ಬಣ್ಣ ಬಯಲು ಮಾಡಿ. ಧಾರ್ಮಿಕ ಅಲ್ಪ ಸಂಖ್ಯಾತರನ್ನು ಹಿಂಸಿಸುತ್ತಿರುವ   ಪಾಕಿಸ್ತಾನ ಬೆಂಬಲಿಸಿ, ಪೌರತ್ವ ಕಾಯ್ದೆ ವಿರೋಧಿಸುತ್ತೀರಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸರಣಿ ಟ್ವೀಟ್ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕುಟುಕಿದ್ದಾರೆ.

ಸಿಎಎ ವಿಷಯದಲ್ಲಿ ಪದೇ ಪದೇ ಪಾಕಿಸ್ತಾನದ ಜಪ ಮಾಡುವ ಮೋದಿ ಅವರೇ ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ? ಎಂದು  ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಪಾಕಿಸ್ತಾನದ ವಲಸಿಗರು, ನಿರಾಶ್ರಿತರು ನಿಮಗೆ ವೋಟು ಕೊಟ್ಟರೋ?  ಭಾರತದ ಪ್ರಜೆಗಳು ವೋಟು ಕೊಟ್ಟರೋ? ಭಾರತೀಯ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ, ಪಾಕಿಸ್ತಾನದ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ ಎಂದಿದ್ದಾರೆ

ಭಾರತೀಯರ ವೋಟು ಪಡೆದು ಸಂವಿಧಾನದ ಪ್ರಕಾರ ಪ್ರಧಾನಿಯಾದ ನಿಮಗೆ ಇಲ್ಲಿನ ರಾಜ್ಯಗಳ ಅಭಿವೃದ್ಧಿ ಆದ್ಯತೆಯೋ ಪಾಕಿಸ್ತಾನದವರಿಗೆ ಪೌರತ್ವ ನೀಡುವುದು ಆದ್ಯತೆಯೋ? ಒಕ್ಕೂಟ ವ್ಯವಸ್ಥೆಯ ಭಾಗವಾಗಿರುವ ಕರ್ನಾಟಕಕ್ಕೆ ಕೊಡಬೇಕಾದ ಅನುದಾನ ಕೊಡಲಾಗದಿದ್ದರೂ ಪಾಕಿಸ್ತಾನದ ಮೇಲೆ ನಿಮಗೆ ಪ್ರೀತಿ ಉಕ್ಕುತ್ತಿರುವುದೇಕೆ? ಅಲ್ಲಿನವರ ಮೇಲೆ ಯಾಕಿಷ್ಟು ಮಮಕಾರ.

25 ಸಂಸದರನ್ನು ಕೊಟ್ಟ ಕರ್ನಾಟಕದಲ್ಲಿ ಉಂಟಾದ ನೆರೆಯಿಂದ ₹35 ಸಾವಿರ ಕೋಟಿ ನಷ್ಟವಾದರೂ ಕೇಂದ್ರ ಕೊಟ್ಟಿದ್ದು ಚಿಕ್ಕಾಸು. ನರೇಗಾ ಬಾಕಿ ಕೊಟ್ಟಿಲ್ಲ. ತೆರಿಗೆಯಲ್ಲಿ ರಾಜ್ಯದ ಪಾಲು ಕೊಟ್ಟಿಲ್ಲ. ಬರ ಪರಿಹಾರವಿಲ್ಲ. ಇವುಗಳ ಬಗ್ಗೆ ಮಾತನಾಡಲಾಗದ ನೀವು ಮಾತಾಡುವುದು ಪಾಕಿಸ್ತಾನದ ಬಗ್ಗೆ. ಮೊದಲು ಪಾಕಿಸ್ತಾನದ ಜಪ ನಿಲ್ಲಿಸಿ ಕರ್ನಾಟಕಕ್ಕೆ ಬರಬೇಕಾದ ಹಣ ಕೊಡಿ.

 

ಕೇಂದ್ರ ಕಟ್ಟಿಸಿಕೊಂಡ ತೆರಿಗೆಯ ಕರ್ನಾಟಕದ ಪಾಲನ್ನು ಹಾಗೂ ನೆರೆ ಪರಿಹಾರದ ಹಣವನ್ನು ಯಡಿಯೂರಪ್ಪ ಪಾಕಿಸ್ತಾನವನ್ನು ಕೇಳಬೇಕೋ ಅಥವಾ ಭಾರತೀಯ ಮತದಾರರಿಂದ ಆಯ್ಕೆಯಾದ ನಿಮ್ಮನ್ನು ಕೇಳಬೇಕೋ? ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ನಮಿಸಿ, ವಿದ್ಯಾರ್ಥಿಗಳ ಎದುರು ಭಾಷಣ ಮಾಡಿದ ನೀವು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಏನಾದರೂ ಸಲಹೆ ಕೊಟ್ಟಿರಾ? ಇಲ್ಲ… ಅದನ್ನು ಬಿಟ್ಟು ಪಾಕಿಸ್ತಾನದ ಜಪ ಮಾಡುತ್ತೀರಿ. ಇದು ನಿಮ್ಮ ರಾಜಕೀಯ, ಅಧಿಕಾರದ ಆಸೆಯನ್ನು ಸಾಬೀತು ಮಾಡುತ್ತದೆ ಎಂದಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *