ಡಿವಿಜಿ ಸುದ್ದಿ, ಬೆಂಗಳೂರು: ಸಂಪನ್ಮೂಲ ಸಂಗ್ರಹಿಸಲು ಅಬಕಾರಿ ಇಲಾಖೆ ಆನ್ಲೈನ್ ಮೂಲಕ ಮನೆ ಬಾಗಿಲಿಗೆ ಮದ್ಯ ಪೂರೈಸಲು ಮುಂದಾಗಿದೆ. ಇಂತಹ ಅವಿವೇಕದ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ನಡೆಸುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿಎಚ್ಚರಿಕೆನೀಡಿದ್ದಾರೆ.
ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಚಿಂತನೆಯನ್ನು ಸರ್ಕಾರ ಮಾಡಿದೆ. ಇದನ್ನು ತಕ್ಷಣ ಕೈ ಬಿಡಬೇಕು. ಲಾಕ್ಡೌನ್ನಿಂದಾಗಿ ಸರ್ಕಾರಕ್ಕೆ ಆರ್ಥಿಕವಾಗಿ ಭಾರೀ ಹೊಡೆತ ಬಿದ್ದಿದೆ. ಈ ಕಾರಣದಿಂದ ಹಳ್ಳಿಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿಗಳನ್ನು ತೆರೆಯಲು ನಿರ್ಧರಿಸಿದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿ ಬಿದ್ದಿರುವ ಅಬಕಾರಿ ಇಲಾಖೆ ಆನ್ಲೈನ್ ಮೂಲಕ 'ಮನೆ ಬಾಗಿಲಿಗೆ ಮದ್ಯ' ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ/ಚಿಂತನೆಯನ್ನು ಮಾಡಿದೆ. ಇದನ್ನು ಕೈಬಿಡುವಂತೆ ಒತ್ತಾಯಿಸುತ್ತೇನೆ.
1/4 pic.twitter.com/Nhxp79VM2i— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 8, 2020
ಹಳ್ಳಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯುವ ಬಗ್ಗೆ ಖಾಸಗಿ ಕಂಪನಿ ಜೊತೆ ಮಾತುಕತೆ ಹಾಗೂ ಅಬಕಾರಿ ಆಯುಕ್ತರು ಈ ಬಗ್ಗೆ ಒಲವು ಹೊಂದಿರುವುದು ನನ್ನ ಗಮನಕ್ಕೆ ಬಂದಿದೆ. ಸರ್ಕಾರ ಇಂತಹ ಅವಿವೇಕದ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.



