ಮಳೆಗಾಲದಲ್ಲಿ ಉತ್ತಮ ಆರೋಗ್ಯಕ್ಕೆ ಶುಂಠಿಯೇ  ಮದ್ದು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಈ ಮಳೆಗಾಲದಲ್ಲಿ ರೋಗಗಳು ಕಾಣಿಸಿಕೊಳ್ಳುವುದು  ಸಾಮಾನ್ಯ. ಇದರ ಮಧ್ಯೆ ಈಗ  ಕೊರೋನಾ ಬೇರೆ ಬಂದು ಬಿಟ್ಟಿದೆ. ಮಳೆಗಾಲದಲ್ಲಿ ಶೀತ, ಕೆಮ್ಮು, ಗಂಟಲು ಕೆರೆತ ಸಾಮಾನ್ಯ. ಈಗ  ಕೊರೊನಾ ಸಮಸ್ಯೆಯೋ ಅಥವಾ ಸಾಮಾನ್ಯ ಶೀತ ಕೆಮ್ಮು ಬಂದಿದೆಯೋ ಎನ್ನುವುದು ಗೊತ್ತಾಗುವುದಿಲ್ಲ.

ginger

ಇನ್ನು ಶ್ವಾಸಕೋಶದ ಸಮಸ್ಯೆ ಇರುವವರಂತೂ ತಮ್ಮ ಆರೋಗ್ಯದ ಬಗ್ಗಷ್ಟೇ ಗಮನ ಹರಿಸದೆ ಇದ್ದರೆ, ಮಳೆಗಾಲದಲ್ಲಿ ಸಮಸ್ಯೆ ಎದುರಾಗುತ್ತದೆ. ಈ ಎಲ್ಲಾ ರೋಗಗಳಿಗೆ  ಶುಂಠಿಯೇ ಮನೆಯ ಮದ್ದು.

ಒಣ ಕೆಮ್ಮುಗೆ ಏನು ಮಾಡಬೇಕು..?

ಒಂದು ವೇಳೆ ನಿಮಗೆ ಶೀತ, ಕೆಮ್ಮು, ಶ್ವಾಸಕ್ಕೆ ಸಂಬಂಧಿಸಿದ ಸಮಸ್ಯೆ ಕಂಡು ಬಂದರೆ ಈ ರೀತಿ ಮಾಡಿ;  ಸಮಸ್ಯೆ ಹೆಚ್ಚಾದರೆ ವೈದ್ಯರನ್ನು ಕಾಣಲು ಮರೆಯಬೇಡಿ. ಒಣ ಕೆಮ್ಮು ಕಂಡು ಬಂದರೆ ಶುಂಠಿ ರಸಕ್ಕೆ ಜೇನು, ತುಳಸಿ ರಸ ಹಾಗು ಕರಿಮೆಣಸಿನ ಪುಡಿ ಹಾಕಿ ಸೇವಿಸಿ. ಇದರಿಂದ ಒಣ ಕೆಮ್ಮು
ನಿವಾರಣೆಯಾಗುತ್ತದೆ.

ginger 3

ಕಫ ನಿವಾರಣೆ ಹೇಗೆ

ಶುಂಠಿ ರಸ ಮತ್ತು ದಾಳಿಂಬೆ ರಸವನ್ನು ಸಮಾನ ಪ್ರಮಾಣದಲ್ಲಿ ತೆಗೆದುಕೊಂಡು ಅದಕ್ಕೆ ಒಂದಿಷ್ಟು ಜೇನು ಬೆರೆಸಿ ದಿನಕ್ಕೆ ಮೂರು ಬಾರಿ ಸೇವಿಸಬೇಕು. ಇದರಿಂದ ಅಸ್ತಮಾ ನಿಯಂತ್ರಣಕ್ಕೆ ಬರುತ್ತದೆ.ಶುಂಠಿಯನ್ನು ಜಜ್ಜಿ ನೀರಿಗೆ ಹಾಕಿ ಕುದಿಸಿ, ಈ ನೀರನ್ನು ತಣ್ಣಗಾದ ಮೇಲೆ ಸೇವಿಸಿ. ಇದರಿಂದ ಕಫ ನಿವಾರಣೆಯಾಗುತ್ತದೆ.

ಗಂಟಲು ನೋವು ನಿವಾರಣೆ
ಶುಂಠಿಯನ್ನು ಜಜ್ಜಿ ನೀರಿಗೆ ಹಾಕಿ, ಅದಕ್ಕೆ ಅರ್ಧ ಹೆಚ್ಚಿದ ಈರುಳ್ಳಿ, ಬೆಲ್ಲ, ಕರಿಮೆಣಸು ಹಾಕಿ ಕುದಿಸಿ ಸೋಸಿ ಕುಡಿದರೆ ಗಂಟಲು ನೋವು,ಕೆಮ್ಮು, ಶೀತ, ಗಂಟಲು ಕೆರೆತ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *