ಡಿವಿಜಿ ಸುದ್ದಿ, ಮಂಡ್ಯ: ಕೊಡಗಿನಲ್ಲಿ ಭಾರೀ ಮಳೆಯಿಂದಾಗಿ ಕಾವೇರಿ ಮತ್ತು ಹೇಮಾವತಿ ನದಿ ಉಕ್ಕಿ ಹರಿಯುತತ್ತಿದೆ. ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ.
124.80 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಈಗಾಗಲೇ 117.75 ಅಡಿ ನೀರು ಸಂಗ್ರಹವಾಗಿದ್ದುಮ 70 ಸಾವಿರ ಕ್ಯೂಸೆಕ್ ಒಳಹರಿವು ಹೊಂದದ್ದು, 75 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.
ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಹೆಚ್ಚಾಗಿದ್ದು, ರಂಗನತಿಟ್ಟು ಪಕ್ಷಿಧಾಮ ಸೇರಿದಂತೆ ಪ್ರವಾಸಿ ತಾಣಗಳು ಜಲಾವೃತವಾಗುವ ಸಾಧ್ಯತೆ ಇದೆ.



