ಶ್ರೀರಾಮುಲು ವಿರುದ್ಧ ಕಿಡಿಕಾರಿದ ಮಾಜಿ ಶಾಸಕ ತಿಪ್ಪೇಸ್ವಾಮಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಚಿತ್ರದುರ್ಗ: ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಸಚಿವರಿಂದ ಕ್ಷೇತ್ರದಲ್ಲಿ ಅಭಿವೃದ್ಧಿಯೂ ಇಲ್ಲ, ಜನರ ಪ್ರಾಣ ರಕ್ಷಣೆಯೂ ಇಲ್ಲ ಎಂದಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ಲಂಚಕೋರ, ಭ್ರಷ್ಟ. ಆತನಿಂದ ಅಭಿವೃದ್ಧಿಯೂ ಇಲ್ಲ, ಜನಗಳ ಪ್ರಾಣ ರಕ್ಷಣೆಯೂ ಇಲ್ಲ ಎಂದು ಕಿಡಿಕಾರಿದ್ದಾರೆ. ಶ್ರೀರಾಮುಲು ಮತ್ತು ಅವರ ಪಿಎಗಳಿಗೆ ಸುಲಿಗೆ ಮಾತ್ರ ಗೊತ್ತಿದೆ ಎಂದರು.

ಬಳ್ಳಾರಿಯಲ್ಲಿ ಒಂದೇ ಗುಂಡಿಯಲ್ಲಿ 8 ಜನರನ್ನು ಹೂಳಲಾಗಿದೆ. ಶ್ರೀರಾಮುಲು ತವರು ಜಿಲ್ಲೆಯಲ್ಲಿ ನಡೆದ ಕೃತ್ಯ ನಾಚಿಕೆ ಆಗಬೇಕು. ಪರಶುರಾಂಪುರದಲ್ಲಿ ಶ್ರೀರಾಮುಲು ಸಾವಿರಾರು ಜನರ ಜೊತೆ ಮೆರವಣಿಗೆ ಮಾಡಿದ್ದಾರೆ. ಆದರೂ ಸಚಿವರ ವಿರುದ್ಧ ಡಿಸಿ, ಎಸ್ಪಿ ಯಾವುದೇ ದೂರು ದಾಖಲಿಸಿಲ್ಲ.

ಪುತ್ರನ ಮದುವೆ ಮಾಡಿದ ಹೊಸದುರ್ಗದ ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ವಿರುದ್ಧ ಕೇಸು ದಾಖಲಿಸಿದ್ದಾರೆ. ಒಬ್ಬರಿಗೆ ಒಂದು ನ್ಯಾಯ, ಇನ್ನೊಬ್ಬರಿಗೆ ಇನ್ನೊಂದು ನ್ಯಾಯ ಮಾಡಿದರೆ ಉಗ್ರ ಹೋರಾಟ ಮಾಡುತ್ತೇವೆಂದು ಎಚ್ಚರಿಕೆ ನೀಡಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *