ದೀಪಾವಳಿ ದಿನವೇ ರೈತನಿಗೆ ಕರಾಳ ದಿನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಹೊನ್ನಾಳಿ: ದೀಪದ ಹಬ್ಬ ದೀಪಾವಳಿ ಇವತ್ತು ರೈತನಿಗೆ ಕರಾಳ ದಿನವಾಗಿತ್ತು.. ಹೌದು, ತನ್ನ ಕೃಷಿ ಕಾರ್ಯ ಮುಗಿಸಿಕೊಂಡು ಎತ್ತು ಮೈತೊಳೆಯಲು ಹೋದ ರೈತ ತುಂಗಾಭದ್ರ ನದಿಯಲ್ಲಿ ನೀರಿನ ಸೆಳೆತಕ್ಕೆ ಸಿಕ್ಕು ನೀರು ಪಾಲಾದ ಘಟನೆ ಹೊನ್ನಾಳಿ ತಾಲ್ಲೂಕಿನ ಬೇಲಿಮಾಲ್ಲೂರು ಗ್ರಾಮದಲ್ಲಿ ನಡೆದಿದೆ.

honnalli dvgsuddi

ಎರಡು ಎತ್ತುಗಳ ಸಾವನ್ನಪ್ಪಿದ್ದು, ನೀರು ಪಾಲಾದ ರೈತ ರಮೇಶಗಾಗಿ (28) ಹುಡುಕಾಟ ನಡೆಯುತ್ತಿದೆ. ಚಕ್ಕಡಿ, ಎತ್ತುಗಳ ಸಹಿತ ನೀರಿಗಳಿದಿದ್ದ ರೈತ ರಮೇಶ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ  ರೇಣುಕಾಚಾರ್ಯ ರೈತನ ಕುಟುಂಬಕ್ಕೆ ಸಾಂತ್ವನ ಹೇಳಿದರು. 2 ಎತ್ತುಗಳಿಗೆ 60 ಸಾವಿರ ರೂಪಾಯಿಗಳನ್ನು ಪಶು ಇಲಾಖೆ ವತಿಯಿಂದ  ಮತ್ತು ವೈಯಕ್ತಿಕವಾಗಿ 50 ಸಾವಿರ ರೂಪಾಯಿ ಗಳನ್ನು ಕೊಡುವುದಾಗಿ ರೇಣುಕಾಚಾರ್ಯ ಸ್ಥಳದಲ್ಲೇ ಘೋಷಿಸಿದರು.  ಮೃತ ದೇಹ ಸಿಕ್ಕ ನಂತರ ಸರ್ಕಾರ ದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

honnalli

ಹೊನ್ನಾಳಿ ಪೊಲೀಸ್ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳೀಯರು ಸಹ ಶವ ಶೋಧ ಕಾರ್ಯಾಚರಣೆ ನಡೆಸಿದರು.ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *