ನವದೆಹಲಿ: ಭಾರತೀಯ ರೈಲ್ವೇ ಇಲಾಖೆ ಜೂನ್ 30 ರವರೆಗೆ ಕಾಯ್ದಿರಿಸಿದ ಎಲ್ಲಾ ಸಾಮಾನ್ಯ ರೈಲು ಟಿಕೆಟ್ಗಳನ್ನು ರದ್ದುಗಿಳಿಸಿ ಆದೇಶ ಹೊರಡಿಸಿದೆ.
ವಿಶೇಷ ರೈಲುಗಳಲ್ಲಿ ಕಾಯ್ದಿರಿಸಿದ ಎಲ್ಲ ಪ್ರಯಾಣಿಕರ ಟಿಕೆಟ್ಗಳನ್ನು ರದ್ದುಪಡಿಸಲಾಗಿದೆ ಮತ್ತು ಬುಕ್ಕಿಂಗ್ ಮಾಡಿದ್ದ ಹಣವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದಾಗಿ ತಿಳಿಸಿದೆ. ಮೇ 12 ರಿಂದ ಓಡಲು ಪ್ರಾರಂಭಿಸಿರುವ ಶ್ರಮಿಕ್ ವಿಶೇಷ ರೈಲುಗಳು ಮತ್ತು ವಿಶೇಷ ರೈಲುಗಳು ಎಂದಿನಿಂದ ತಮ್ಮ ಓಡಾಟ ನಡೆಸಲಿವೆ. ಶ್ರಮಿಕ್ ವಿಶೇಷ ರೈಲುಗಳು ಲಾಕ್ಡೌನ್ನಿಂದಾಗಿ ವಿವಿಧ ರಾಜ್ಯಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ರಾಜ್ಯಗಳಿಗೆ ಕರೆದುಕೊಂಡು ಹೋಗುತ್ತಿವೆ. 15 ವಿಶೇಷ ರೈಲುಗಳು ದೆಹಲಿಯಿಂದ ವಿವಿಧ ರಾಜ್ಯಗಳ ರಾಜಧಾನಿಗಳಿಗೆ ಸಂಪರ್ಕ ಕಲ್ಪಿಸುತ್ತಿದೆ.
ಜೂನ್ 30ರೊಳಗಿನ ಪ್ರಯಾಣಕ್ಕಾಗಿ ಮಾರ್ಚ್ 22ಕ್ಕೂ ಮುನ್ನ ಕಾಯ್ದಿರಿಸಲಾಗಿರುವ ರೈಲು ಟಿಕೆಟ್ಗಳನ್ನು ರದ್ದು ಪಡಿಸಲಾಗಿದೆ. ಐಆರ್ಸಿಟಿಸಿ ವೆಬ್ಸೈಟ್ ಮೂಲಕ ಟಿಕೆಟ್ ಬುಕ್ ಮಾಡಿರುವವರು ಟಿಕೆಟ್ ರದ್ದು ಪಡಿಸಬೇಕಿಲ್ಲ. ಟಿಕೆಟ ಹಣ ಬ್ಯಾಂಕ್ ಖಾತೆಗೆ ಮರುಪಾವತಿಯಾಗಲಿದೆ. ಆದರೆ ರಿಸರ್ವೇಷನ್ ಕೌಂಟರ್ಗಳಲ್ಲಿ ಟಿಕೆಟ್ ಬುಕ್ ಪಡೆದರಿಗೆ ಮೂರು ತಿಂಗಳ ಒಳಗಾಗಿ ಹಣ ಸಿಗುತ್ತದೆ.
ಕೊರೊನಾ ವೈರಸ್ನಿಂದ ಇಡೀ ದೇಶವೇ ಲಾಕ್ಡೌನ್ ಆಗಿತ್ತು. ಹೀಗಾಗಿ ಮೇಲ್, ಎಕ್ಸ್ಪ್ರೆಸ್, ಪ್ರಯಾಣಿಕ ಮತ್ತು ಉಪನಗರ ರೈಲು ಸೇವೆಗಳನ್ನು ಮಾರ್ಚ್ 25 ರಿಂದ ಸ್ಥಗಿತಗೊಳಿಸಿತ್ತು.



