ಇಂದಿರಾ ಗಾಂಧಿ ಕ್ಯಾಂಟೀನ್ ಹೆಸರು ಬದಲಾವಣೆಗೆ ಸರ್ಕಾರ ಚಿಂತನೆ: ಆರ್‌ ಅಶೋಕ್‌

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷಿಯ  ಇಂದಿರಾ ಕ್ಯಾಂಟೀನ್ ಯೋಜನೆಯ ಹೆಸರನ್ನು ಕೈ ಬಿಟ್ಟು` ಮಹರ್ಷಿ ವಾಲ್ಮೀಕಿ ಅನ್ನಕುಟೀರ’ ಎಂದು ಮರು ನಾಮಕಾರಣ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.

ashoka

ವಿಧಾನಸೌಧದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿ  ` ಮಹರ್ಷಿ ವಾಲ್ಮೀಕಿ ಅನ್ನ ಕುಟೀರ’ ಎಂದು ನಾಮಕರಣ ಮಾಡಬೇಕು ಎಂದು ಮಾಜಿ ಸಚಿವ ರಾಜೂಗೌಡರು ಮನವಿ ಮಾಡಿದ್ದಾರೆ‌. ಅವರ ಮನವಿ ಪರಿಶೀಲನೆ ನಡೆಸಿದ್ದು, ಸಿಎಂ ಜತೆ ಚರ್ಚಿಸಿ ಬೆಂಗಳೂರು ಹೊರತು ಪಡಿಸಿ ರಾಜ್ಯದ ಉಳಿದ ಸ್ಥಳಗಳಲ್ಲಿ ಹೆಸರು ಬದಲಾವಣೆ ಮಾಡಲಾಗುತ್ತದೆ ಎಂದರು.

ಕಂದಾಯ ಇಲಾಖೆ, ಆಹಾರ ಸರಬರಾಜು ಇಲಾಖೆಯಲ್ಲಿ ಬದಲಾವಣೆ ಮಾಡಲು ಉದ್ದೇಶಿಸಲಾಗಿದೆ. ವೃದ್ದಾಪ್ಯ ವೇತನದ ವಿಷಯದಲ್ಲಿ ಹೆಚ್ಚಿನ ದೂರುಗಳು ಬರುತ್ತಿವೆ. ಅರ್ಹ ಫಲಾನುಭವಿಗಳಿಗೆ ವೃದ್ದಾಪ್ಯ ವೇತನ ಸಿಗುವಂತಾಗಬೇಕು. ಅದಕ್ಕಾಗಿ ವೃದ್ದಾಪ್ಯ ವೇತನಕ್ಕೆ ಆಧಾರ್ ಲಿಂಕ್ ಮಾಡಲು ಉದ್ದೇಶಿಸಿದ್ದೇವೆ ಎಂದು ಸಚಿವರು ತಿಳಿಸಿದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *