Connect with us

Dvgsuddi Kannada | online news portal | Kannada news online

ಆರೋಪ ಸಾಬೀತು ಮಾಡಿದರೆ, ಪ್ರಾಣ ಬಿಡಲು ಸಿದ್ಧ : ಶ್ರೀ ದಿಂಗಲೇಶ್ವರ ಸ್ವಾಮೀಜಿ

ಪ್ರಮುಖ ಸುದ್ದಿ

ಆರೋಪ ಸಾಬೀತು ಮಾಡಿದರೆ, ಪ್ರಾಣ ಬಿಡಲು ಸಿದ್ಧ : ಶ್ರೀ ದಿಂಗಲೇಶ್ವರ ಸ್ವಾಮೀಜಿ

ಡಿವಿಜಿ ಸುದ್ದಿ, ಧಾರವಾಡ: ಕೆಲವರು ನನ್ನ ವಿರುದ್ಧ ಗುಂಡಾ, ಅಯೋಗ್ಯ ಎಂಬ ಸುದ್ದಿ ಹಬ್ಬಿಸುತ್ತಿದ್ದಾರೆ. ನಾನು ಗುಂಡಾ, ಅಯೋಗ್ಯ ಆಗಿದ್ದರೆ ಅದನ್ನ ತುಂಬಿದ ಸಭೆಯಲ್ಲಿ ಆರೋಪವನ್ನ ಸಾಬೀತು ಮಾಡಿದರೆ, ಮೂರುಸಾವಿರ ಮಠದ  ಗದ್ದುಗೆ ಎದುರೇ ಪ್ರಾಣ ಬಿಡುಲು ಸಿದ್ಧ ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಸವಾಲ್ ಹಾಕಿದ್ದಾರೆ.

ಧಾರವಾಡ ಲಿಂಗಾಯತ ಭವನದಲ್ಲಿ ನಡೆದ ಭಕ್ತರ ಮತ್ತು ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ನಾನು ಮೂರುಸಾವಿರ ಮಠದ ಗದ್ದುಗೆಗಾಗಿ ಸಭೆಗಳನ್ನು ಮಾಡುತ್ತಿಲ್ಲ. ಮಠಕ್ಕೆ ಸುತ್ತಿದ ವಿವಾದ ಬಗೆಹರಿಸಲು ಭಕ್ತರು ಸಭೆ ಮಾಡುತ್ತಿದ್ದೇನೆ. ನಾನು ಮೂರುಸಾವಿರ ಮಠದ ಜಗದ್ಗುರುಗಳನ್ನು ಭೇಟಿ ಮಾಡುತ್ತೇನೆ. ಸ್ವಾಮೀತ್ವಕ್ಕೆ ಮಠ ಬೇಕಾಗಿಲ್ಲ. ಆದರೆ ಈಗ ನನ್ನ ಗೌರವದ ಪ್ರಶ್ನೆ ಬಂದಿದೆ. ಹೀಗಾಗಿ ನಾನು ಮುಂದೆ ಬಂದಿದ್ದೇನೆ ಎಂದು ಸಭೆಯಲ್ಲಿ ತಿಳಿಸಿದರು.

ನನಗೂ ಮತ್ತು ಮೂರುಸಾವಿರ ಮಠ ಜಗದ್ಗುಗಳ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅವರು ಗುರುಗಳು. ನಾನು ಅವರ  ಶಿಷ್ಯ. ಆದರೆ ಕೆಲವರು ನಮ್ಮ ನಡುವೆ ಭಿನ್ನಾಭಿಪ್ರಾಯ ತಂದಿಟ್ಟಿದ್ದಾರೆ. ಕೆಲವರ ರಾಜಕೀಯದಿಂದ ಈ ಪರಿಸ್ಥಿತಿ ಎದುರಾಗಿದೆ. ಅಂಥವರನ್ನು ಮಠದಿಂದ ದೂರವಿಡಬೇಕಿದೆ. ದಿಂಗಾಲೇಶ್ವರ ಸ್ವಾಮೀಜಿ ಬರಬೇಕು ಎಂದು ಭಕ್ತರು ಬಯಸಿದ್ದಾರೆ. ಆದರೆ ಕೆಲವರು ದಿಂಗಾಲೇಶ್ವರ ಸ್ವಾಮೀಜಿ ಬರಬಾರದು ಎಂಬ ಪ್ರಯತ್ನ ಮಾಡಿದ್ದಾರೆ. ನಾನು ಮಠಕ್ಕೆ ಅನ್ಯಾಯ ಮಾಡಿದ್ದರೆ, ದ್ರೋಹ ಮಾಡಿದ್ದರೆ ಸಾಬೀತು ಮಾಡಿ ತೋರಿಸಲಿ ಎಂದು ಸವಾಲ್ ಹಾಕಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top