Connect with us

Dvgsuddi Kannada | online news portal | Kannada news online

ಜಗಳೂರು ಸಮೀಪ ಹೊತ್ತಿ ಉರಿದ ಗ್ಯಾಸ್ ಟ್ಯಾಂಕರ್

ಜಗಳೂರು

ಜಗಳೂರು ಸಮೀಪ ಹೊತ್ತಿ ಉರಿದ ಗ್ಯಾಸ್ ಟ್ಯಾಂಕರ್

ಡಿವಿಜಿ ಸುದ್ದಿ, ಜಗಳೂರು:  ತಾಲ್ಲೂಕಿನ ದೊಣ್ಣಿಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗ್ಯಾಸ್ ಟ್ಯಾಂಕರ್ ಹೊತ್ತಿ ಉರಿದಿದೆ.

ಗ್ಯಾಸ್ ಟ್ಯಾಂಕರ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಬೆಂಕಿ ನಂದಿಸಲು ದಾವಣಗೆರೆ, ಚಿತ್ರದುರ್ಗದ 8 ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಮಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಸ್ಥಗಿತಗೊಳಿಸಲಾಗಿದೆ.

ಅತೀ ವೇಗವೇ ಅಪಘಾತಕ್ಕೆ ಕಾರಣವಾಗಿದೆ. ಮಂಗಳೂರು-ಕೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಇದಾಗಿದೆ. ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜಗಳೂರು

To Top