Connect with us

Dvgsuddi Kannada | online news portal | Kannada news online

ಸರ್ಕಾರಿ ಆಸ್ಪತ್ರೆಗಳಲ್ಲಿ 253 ನರ್ಸ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ವೇತನ 32 ಸಾವಿರ

ಪ್ರಮುಖ ಸುದ್ದಿ

ಸರ್ಕಾರಿ ಆಸ್ಪತ್ರೆಗಳಲ್ಲಿ 253 ನರ್ಸ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ವೇತನ 32 ಸಾವಿರ

ಡಿವಿಜಿ ಸುದ್ದಿ, ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ 253 ನರ್ಸ್‌ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಾದ ಬೀದರ್‌, ಬಳ್ಳಾರಿ, ಕೊಪ್ಪಳ, ಯಾದಗಿರಿ, ಕಲ್ಬುರ್ಗಿ ಮತ್ತು ರಾಯಚೂರು ಜಿಲ್ಲಾ ಆಸ್ಪತ್ರೆಗಳು ಸೇರಿದಂತೆ ಹೆಲ್ತ್‌ ಸೆಂಟರ್‌ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೆ ಸರ್ಕಾರ ಮುಂದಾಗಿದೆ. ಈ ಹುದ್ದೆಗಳನ್ನು  ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಿದ್ದು,  ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಒಟ್ಟು 253 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಮಾಸಿಗೆ 24 ಸಾವಿರ ವೇತನ ಜೊತೆಗೆ 8 ಸಾವಿರ  ಸೇವಾ ಪ್ರೋತ್ಸಾಹ ಭತ್ಯೆ ನೀಡಲಿದೆ. ನೇಮಕಾತಿ ಆನ್ ಲೈನ್ ನಲ್ಲಿ ನಡೆಯಲಿದ್ದು, ಅರ್ಜಿ ಸಲ್ಲಿಸಲು ಫೆ. 7 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲ್ಲಿಸಲು ವೆಬ್ಸೈಟ್‌: http://techkshetra.info ಭೇಟಿ ನೀಡಿ.  ಸರ್ಕಾರದ ಅಧಿಸೂಚನೆಗಾಗಿ ಸರ್ಕಾರದ ವೆಬ್ಸೈಟ್https://www.karnataka.gov.in/hfw/pages/home.aspx ಭೇಟಿ ನೀಡಿ ವಿವರ ಪಡೆಯಬಹುದು.

ಒಟ್ಟು ಹುದ್ದೆಗಳ ಸಂಖ್ಯೆ: 253

ವಿದ್ಯಾರ್ಹತೆ: ಮ್ಯಾನತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್‌.ಸಿ ನರ್ಸಿಂಗ್‌, ಪೋಸ್ಟ್‌ ಬಿಎಸ್‌.ಸಿ ನರ್ಸಿಂಗ್ ಪದವಿ ಪೂರೈಸಿರಬೇಕು. ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಿಕೊಂಡಿರಬೇಕು.

ವೇತನಮಾಸಿಕ ₹ 24,200 ಹಾಗೂ ಹೆಚ್ಚುವರಿಯಾಗಿ ₹8,000 ಸೇವಾ ಪ್ರೋತ್ಸಾಹ ಭತ್ಯೆ ಕೂಡ ನೀಡಲಾಗುತ್ತದೆ.

ವಯಸ್ಸುಕನಿಷ್ಠ–18, ಗರಿಷ್ಠ –35 ವರ್ಷ (ಮೀಸಲಾತಿ ಅನ್ವಯ ಸಡಿಲಿಕೆ ಇರುತ್ತದೆ).

ವಯೋಮಿತಿ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್‌ ಆಧಾರಿತ ಆನ್‌ಲೈನ್ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಯಲ್ಲಿ ಮೆರಿಟ್‌ ಪಡೆದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆಗೆ ಕರೆಯಲಾಗುವುದು.

ನೇಮಕಾತಿ ಸ್ಥಳಗಳು: ಬಳ್ಳಾರಿ, ಕೊಪ್ಪಳ, ಬೀದರ್‌, ರಾಯಚೂರು, ಕಲ್ಬುರ್ಗಿ, ಯಾದಗಿರಿ

ಅರ್ಜಿ ಸಲ್ಲಿಸಲು ಕೊನೆಯ ದಿನ: 07 ಫೆಬ್ರುವರಿ 2020

ಅರ್ಜಿ ಸಲ್ಲಿಸುವ ವೆಬ್ಸೈಟ್‌:  http://techkshetra.info

ಸರ್ಕಾರದ ವೆಬ್ಸೈಟ್‌: https://www.karnataka.gov.in/hfw/pages/home.aspx

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top