ಡಿವಿಜಿ ಸುದ್ದಿ, ಬೆಂಗಳೂರು: ಖ್ಯಾತ ನಟ ಡಾ. ಅಂಬರೀಶ್ ಅವರ ಸ್ಮಾರಕ ನಿರ್ಮಿಸಲು ಶ್ರೀ ಕಂಠೀರವ ಸ್ಟುಡಿಯೋಸ್ ನಲ್ಲಿ 1 ಎಕರೆ 34 ಗುಂಟೆ ಜಾಗ ಮೀಸಲಿಡಲಾಗಿದೆ. ಸ್ಮಾರಕ ನಿರ್ಮಾಣಕ್ಕೆ ಶೀಘ್ರವೇ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಡಾ. ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಉನ್ನತ ಮಟ್ಟದ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ಸ್ಮಾರಕ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು 5 ಕೋಟಿ ನೆರವು ನೀಡಲಿದೆ ಎಂದು ತಿಳಿಸಿದರು.
ಸ್ಮಾರಕ ನಿರ್ಮಾಣ ನಡೆಯಲು ಅನುಕೂಲವಾಗುವಂತೆ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸುವಂತೆ ಸಿಎಂ ಸೂಚನೆ ನೀಡಿದರು.
ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಷ್, ನಟ ಅಭಿಷೇಕ್ ಅಂಬರೀಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಎಂ. ಮಹೇಶ್ವರರಾವ್, ಆಯುಕ್ತ ಡಾ. ಪಿ.ಎಸ್. ಹರ್ಷ ಭಾಗಿಯಾಗಿದ್ದರು.
ಮುಖ್ಯಮಂತ್ರಿ ಶ್ರೀ @BSYBJP ಅವರ ಅಧ್ಯಕ್ಷತೆಯಲ್ಲಿ, ದಿವಂಗತ ಡಾ. ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಪ್ರಥಮ ಉನ್ನತ ಮಟ್ಟದ ಸಮಿತಿ ಸಭೆ ವಿಧಾನಸೌಧದಲ್ಲಿ ನಡೆಯಿತು.
ಅಂಬರೀಶ್ ಅವರ ಪತ್ನಿ ಹಾಗೂ ಸಂಸದೆ ಸುಮಲತಾ, ಪುತ್ರ ಹಾಗೂ ಕಲಾವಿದ ಅಭಿಷೇಕ್, 1/2 pic.twitter.com/ywZWBt8ET1
— CM of Karnataka (@CMofKarnataka) June 29, 2020



