Connect with us

Dvgsuddi Kannada | online news portal | Kannada news online

ಕರ್ನಾಟಕ ಬಂದ್ : ಬಲವಂತ ಬಂದ್ ಗೆ ಪೊಲೀಸರಿಂದ ತಡೆ; ಕನ್ನಡಪರ ಹೋರಾಟಗಾರರಿಂದ ಸಿಎಂ ಯಡಿಯೂರಪ್ಪ ಮನವಿ

ಪ್ರಮುಖ ಸುದ್ದಿ

ಕರ್ನಾಟಕ ಬಂದ್ : ಬಲವಂತ ಬಂದ್ ಗೆ ಪೊಲೀಸರಿಂದ ತಡೆ; ಕನ್ನಡಪರ ಹೋರಾಟಗಾರರಿಂದ ಸಿಎಂ ಯಡಿಯೂರಪ್ಪ ಮನವಿ

 ಡಿವಿಜಿ ಸುದ್ದಿ, ಬೆಂಗಳೂರು:  ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಇಂದು ಬಂದ್ ಗೆ  ಕರೆ ನೀಡಿದ್ದವು.  ಬಂದ್ ಗೆ  ರಾಜ್ಯದ ಎಲ್ಲಾ ಸಂಘಟನೆಗಳು ಸಂಪೂರ್ಣ ಬೆಂಬಲ ನೀಡದ ಪರಿಣಾಮ ನಿರಾಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸರೋಜಿನಿ ಮಹಿಷಿ ವರದಿ ಜಾರಿ ಕುರಿತು ವಿವಿಧ  ಕನ್ನಡ ಪರ ಹೋರಾಟಗಾರರು  ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವಂತೆ ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಬೇಕೆಂದು ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಕನ್ನಡಪರ ಸಂಘಟನೆಗಳು 100 ದಿನಗಳಿಂದ ನಡೆಸುತ್ತಿದ್ದ ಧರಣಿ ನಡೆಸುತ್ತಿದ್ದರು. ಈ ಧರಣಿ ಇಂದು  ಪ್ರತಿಭಟನೆ ಸ್ವರೂಪ ಪಡೆದುಕೊಂಡಿದೆ. ರಾಜ್ಯ ಸರ್ಕಾರವನ್ನು ಗಮನ ಸೆಳಯುವ ಉದ್ದೇಶದಿಂದ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಲಾಗಿತ್ತು.

ಜೆಸ್ಟಿಕ್, ಕೆ. ಆರ್. ಮಾರುಕಟ್ಟೆ, ಸಂಗೊಳ್ಳಿ ರಾಯಣ್ಞ ರೈಲು ನಿಲ್ದಾಣ ಮುಂತಾದ ಕಡೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದತ್ತು. ಬಿಎಂಟಿಸಿ ಬಸ್‌ಗಳು ಎಂದಿನಂತೆ ಓಡಾಡುತ್ತಿವೆ. ಆದರೆ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬಸ್ ಸಂಚಾರ ತಡೆಯಲು ಯತ್ನಿಸಿದರು. ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ.

ಆನಂದ ರಾವ್ ವೃತ್ತದಲ್ಲಿ ಹೋಟೆಲ್‌ಗಳನ್ನು ಬಲವಂತವಾಗಿ ಬಂದ್ ಮಾಡಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ‌ ನಡೆಯಿತು. ವಿಷಯ ತಿಳಿದ ಕೂಡಲೆ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ.

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿಶೀಟರ್‌‌ಗಳು ಸೇರಿ 180 ಮಂದಿಯನ್ನು ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಿಂದ ಉತ್ತರ ವಿಭಾಗದ ಪೊಲೀಸರು ಗುರುವಾರ ನಸುಕಿನಲ್ಲಿ ವಶಕ್ಕೆ ಪಡೆದಿದ್ದಾರೆ. ಬೆಳಗ್ಗೆ 4 ಗಂಟೆಯಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬುಧವಾರ ರಾತ್ರಿ ಪೊಲೀಸ್ ಅಧಿಕಾರಿಗಳು ವಿಶೇಷ ಗಸ್ತು ನಡೆಸಿದ್ದಾರೆ. ಈ ವೇಳೆ, ಹಿಂದೆ ಕಾವೇರಿ ಹೋರಾಟ ಸೇರಿದಂತೆ ಹಲವು ಪ್ರತಿಭಟನೆಗಳಲ್ಲಿ ಭಾಗಿಯಾದವರು ಸೇರಿ ರೌಡಿಶೀಟರ್ ಗಳನ್ನು ವಶಕ್ಕೆ ಪಡೆಯಲಾಗಿದೆ.

 ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ್ ಶೆಟ್ಟಿ  ಅವರಿಗೆ ಪೊಲೀಸರು ಗೃಹ ಬಂಧನ ವಿಧಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಪ್ರವೀಣ್ ಶೆಟ್ಟಿ ಅವರ ಆರ್ ಟಿ ನಗರದ ನಿವಾಸದ ಮುಂದೆ ಪೋಲಿಸರನ್ನು ನಿಯೋಜಿಸಲಾಗಿತ್ತು.ಕರ್ನಾಟಕ ಶ್ರಮಜೀವಿ ಕಾರ್ಮಿಕ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಸಂಪತ್‌ ಕುಮಾರ್ ಮತ್ತು ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ರಾಜ್ಯ ಘಟಕದ ಅಧ್ಯಕ್ಷ.ಮಹಾದೇವಪುರದ ರಾಘವೇಂದ್ರ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆಯಲಾಗಿತ್ತು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top