Connect with us

Dvgsuddi Kannada | online news portal | Kannada news online

ಕರ್ನಾಟಕ ಬಂದ್ ವಿರೋಧಿಸಿ ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ

ಪ್ರಮುಖ ಸುದ್ದಿ

ಕರ್ನಾಟಕ ಬಂದ್ ವಿರೋಧಿಸಿ ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ

ಡಿವಿಜಿ ಸುದ್ದಿ, ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಕನ್ನಡ ಸಂಘಟನೆಗಳ ಒಕ್ಕೂಟ ಕೆರ ನೀಡಿದ್ದ ನಾಳೆ ಕರ್ನಾಟಕ ಬಂದ್‍ಗೆ ವಿವಿಧ ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಬೆಂಗಳೂರಿನ ಟೌನ್‍ಹಾಲ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕ ಹೋರಾಟಗಾರರ ಒಕ್ಕೂಟ, ಕರ್ನಾಟಕ ಕ್ರಾಂತಿರಂಗ ಮತ್ತು ಸರ್ವ ಸಂಘಟನೆಗಳ ಒಕ್ಕೂಟ ಟೌನ್ ಹಾಲ್ ಮುಂದೆ ಪ್ರತಿಭಟನೆ ವಿರೋಧಿಸಿ ಪ್ರತಿಭಟನೆ ನಡೆಸಿವೆ. ನಾಳೆ ನಡೆಯುವ ಬಂದ್ ನಮ್ಮ ಬೆಂಬಲವಿಲ್ಲ ಎಂದು ಸರ್ವ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಲಿಂಗೇಗೌಡ ಕಿಡಿಕಾರಿದ್ದಾರೆ.

ಇದೊಂದು ಅವೈಜ್ಞಾನಿಕ ಬಂದ್. ರೈತರಿಗೆ, ವ್ಯಾಪಾರಸ್ಥರಿಗೆ, ಸಾರ್ವಜನಿಕರಿಗೆ ತೊಂದರೆ ಆಗುವ ಬಂದ್ ಇದು. ಕೆಲ ಸಂಘಟನೆ ಅವರು ತೀರ್ಮಾನ ತಗೊಂಡು ಬಂದ್ ಮಾಡುತ್ತಿದ್ದಾರೆ. ನಮ್ಮನ್ನು ಯಾರು ಕೇಳಿಲ್ಲ, ಕರೆದಿಲ್ಲ ಅವರಷ್ಟೇ ತೀರ್ಮಾನ ಮಾಡಿಕೊಂಡಿದ್ದಾರೆ. ಬಂದ್‍ಗೆ ನಮ್ಮ ಬೆಂಬಲ ಇಲ್ಲ. ಬಂದ್ ಬೇಡಾ ಉದ್ಯೋಗಕ್ಕಾಗಿ ಮಾಡ್ತಿರುವ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಸರೋಜಿನಿ ಮಹಿಷಿ ವರದಿ ಪರಿಷ್ಕೃತ ಆಗಿ ಜಾರಿಗೆ ಬರಬೇಕು ಅಷ್ಟೇ. ನಾಳೆ ಯಾರಾದರೂ ಅಂಗಡಿ ಮುಚ್ಚುಸಿದ್ರೆ, ಬಲವಂತವಾಗಿ ತೊಂದರೆ ಕೊಟ್ಟರೆ ಪರಿಣಾಮ ಸರಿ ಇರಲ್ಲ ಎಂದು ಕರ್ನಾಟಕ ಹೋರಾಟಗಾರರ ಒಕ್ಕೂಟದ ರಾಜ್ಯಾಧ್ಯಕ್ಷ ಆನಂದ್ ಕುಮಾರ್ ಮಾತನಾಡಿ ಕಿಡಿಕಾರಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top