ಪ್ರವಾಹ ಪ್ರದೇಶಗಳ ಅಧ್ಯಯನ; ಸೆ. 07 ರಂದು ರಾಜ್ಯಕ್ಕೆ  ಕೇಂದ್ರ ತಂಡ: ಆರ್ . ಅಶೋಕ್  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಿಂದ  ಪ್ರವಾಹ ಉಂಟಾಗಿ  ಆಗಿರುವ ನಷ್ಟದ ಅಧ್ಯಯನ ನಡೆಸಲು ಸೆ. 7 ರಂದು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ ಬರಲಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು.

ಹಿರಿಯ ಅಧಿಕಾರಿ ಕೆ.ವಿ.ಪ್ರತಾಪ್‌ ಅವರ ನೇತೃತ್ವದಲ್ಲಿ ಆರು ಮಂದಿ ಅಧಿಕಾರಿಗಳನ್ನು ಒಳಗೊಂಡ ತಂಡ ಬರಲಿದೆ.  ಸೆ. 7 ರಂದು ಮುಖ್ಯಮಂತ್ರಿಯರ ಜತೆ ಚರ್ಚೆ ನಡೆಸಲಿದ್ದು,  ಸೆ. 8 ರಂದು ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಲಿದೆ. ಸೆ.9 ರಂದು ಕೇಂದ್ರದ ತಂಡದ ಮತ್ತೆ ಚರ್ಚೆ ನಡೆಸಿ, ರಾಜ್ಯಕ್ಕೆ 4,800 ಕೋಟಿ ಬಿಡುಗಡೆಗೆ ಮನವಿ ಸಲ್ಲಿಸಲಿದ್ದೇವೆ ಎಂದರು.

ಸಿಎಂ ವೈಮಾನಿಕ  ಸಮೀಕ್ಷೆ ನಂತರ  ಕೇಂದ್ರ ಸರ್ಕಾರಕ್ಕೆ  ಅಧಿಕಾರಿಗಳವನ್ನು ಕಳುಹಿಸುವಂತೆ ಮನವಿ ಮಾಡಲಾಗಿತ್ತು.  ನಮ್ಮ ಮನವಿಗೆ ಸ್ಪಂದಿಸಿದೆ ಕೇಂದ್ರ ಅಧಿಕಾರಿಗಳನ್ನು ಕಳುಹಿಸಿದೆ.  ಕೊಡಗು, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ತಂಡ ಭೇಟಿ ನೀಡಲಿದೆ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *