ಡಿವಿಜಿ ಸುದ್ದಿ, ಚನ್ನಗಿರಿ: ತಾಲೂಕಿನ ಅಖಿಲ ಕರ್ನಾಟಕ ಗಾನಯೋಗಿ ಸಂಗೀತ ಪರಿಷತ್ತು ಪರಿಷತ್ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ಸೋಮವಾರ ಬೆಳಗ್ಗೆ 11.00 ಗಂಟೆಗೆ ಹಿರೇ ಕೋಗಲೂರು ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದೆ.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಗುರುಬಸವ ಮಹಾಸ್ವಾಮಿಗಳು. ಮತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೆಜಿ ಜಗದೀಶಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಪ ನಿರ್ದೇಶಕರಾದ ಸಿಆರ್ ಪರಮೇಶ್ವರಪ್ಪ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಂಜುನಾಥ್. ಹಾಗೂ ಸಂತೆಬೆನ್ನೂರು ಪೊಲೀಸ್ ಠಾಣೆಯ ಪಿಎಸ್ಐ ಎಸ್ ಎಸ್ ಮೇಟಿ ಹಾಗೂ ಗಾನಯೋಗಿ ಸಂಗೀತ ಪರಿಷತ್ತಿನ ಚನ್ನಗಿರಿ ತಾಲೂಕ ಘಟಕದ ಪದಾಧಿಕಾರಿಗಳು ಮತ್ತು ಜಿಲ್ಲಾ ಘಟಕದ ಅಧ್ಯಕ್ಷ ಪಂಚಜಾಕ್ಷಿ ಬಕ್ಕೇಶ್, ಕಾರ್ಯದರ್ಶಿ ನಾಗರಾಜ್ ಸಿರಿಗೆರೆ ಮತ್ತು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ಮೂರ್ತಿ ಇನ್ನೂ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಪರಿಷತ್ತು ಅಧ್ಯಕ್ಷ ಕೆ.ಜಿ. ಜಗದೀಶ್ ಗೌಡ್ರು ತಿಳಿಸಿದ್ದಾರೆ.



