ಮಡಿಕೇರಿಯಲ್ಲಿ ಭಾರೀ ಮಳೆ, ಭೂ ಕುಸಿತ:  ಆ.31 ವರೆಗೆ ಭಾರೀ ವಾಹನ ಓಡಾಟ ನಿಷೇಧ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಧಿಕ ಮಳೆ ಹಿನ್ನೆಲೆಯಲ್ಲಿ ಭಾರೀ ವಾಹನ ಓಡಾಟ  ನಿಷೇಧಿಸಿದೆ.

ಆಗಸ್ಟ್ 31 ರವರೆಗೆ ಭಾರೀ ವಾಹನಗಳ ಓಡಾಟವನ್ನು ಮುಂದುವರಿಸಲಾಗಿದೆ. ಮಲ್ಟಿ ಆಕ್ಸಲ್ ಟ್ರಕ್, ಬುಲೆಟ್ ಟ್ಯಾಂಕರ್ಸ್ ಮತ್ತು ಕಂಟೈನರ್ ಲಾರಿ ಓಡಾಟವನ್ನು ನಿಷೇಧ ಮಾಡಲಾಗಿದೆ. ಜೊತೆಗೆ ಮರಳು, ಮರದ ದಿಮ್ಮಿ ಸಾಗಣೆ ವಾಹನಗಳ ಸಂಚಾರವನ್ನು ಕೂಡ ನಿಷೇಧ ಮಾಡಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.

ಈ ಹಿಂದೆಯೇ ಜಿಲ್ಲೆಯಲ್ಲಿ ಭಾರೀ ಮಳೆಯಾಗಿರುವ ಹಿನ್ನೆಲೆಯಲ್ಲಿ ಜುಲೈ ತಿಂಗಳಿಂದ ಆಗಸ್ಟ್ 10 ವರೆಗೆ ನಿಷೇಧಿಸಲಾಗಿತ್ತು. ಮರಳು, ಮರದ ದಿಮ್ಮಿ ಸಾಗಾಣಿಕೆ ವಾಹನಗಳ ಸಂಚಾರ ನಿಷೇಧಿಸಲಾಗಿತ್ತು. ಈಗ ಮಳೆ ಜೋರಾದ ಹಿನ್ನೆಲೆಯಲ್ಲಿ ವಾಹನಗಳ ಓಡಾಟದ ಮೇಲಿನ ನಿಷೇಧವನ್ನು ಮುಂದುವರಿಸಲಾಗಿದೆ.

ಧಾರಾಕಾರ ಮಳೆ ಹಿನ್ನೆಲೆ ಸೋಮವಾರಪೇಟೆ ಒಂದರಲ್ಲೇ 600ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. 5 ಟ್ರಾನ್ಸ್ ಫಾರ್ಮರ್‌ಗಳು ಹಾಗೂ ಮೂರು ಕಿಮೀ ಉದ್ದದ ವಿದ್ಯುತ್ ತಂತಿ ನಷ್ಟವಾಗಿದೆ. ಇತ್ತ ವಿರಾಜಪೇಟೆ ವಿಭಾಗದಲ್ಲಿ ಮೂರು ಕೋಟಿಗೂ ಅಧಿಕ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *